ಸೀತಾಮಾತೆಯ ರಕ್ಷಿಸಿದ ಬಜರಂಗಿ ಬೇಕು; ಬಜರಂಗದಳವಲ್ಲ- ನೀತಾ ಡಿಸೋಜಾ

Published : May 05, 2023, 11:07 AM IST
ಸೀತಾಮಾತೆಯ ರಕ್ಷಿಸಿದ ಬಜರಂಗಿ ಬೇಕು; ಬಜರಂಗದಳವಲ್ಲ- ನೀತಾ ಡಿಸೋಜಾ

ಸಾರಾಂಶ

ನಮಗೆ ಬೇಕಿರುವುದು ಸೀತಾ ಮಾತೆ ರಕ್ಷಿಸಿದ ಬಜರಂಗಿ, ಜನರಲ್ಲಿ ಕೋಮುದ್ವೇಷ ಹುಟ್ಟಿಸುತ್ತಿರುವ ಬಜರಂಗದಳವಲ್ಲ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೀತಾ ಡಿಸೋಜಾ ಹೇಳಿದರು.

ಹುಬ್ಬಳ್ಳಿ (ಮೇ.5) : ನಮಗೆ ಬೇಕಿರುವುದು ಸೀತಾ ಮಾತೆ ರಕ್ಷಿಸಿದ ಬಜರಂಗಿ, ಜನರಲ್ಲಿ ಕೋಮುದ್ವೇಷ ಹುಟ್ಟಿಸುತ್ತಿರುವ ಬಜರಂಗದಳವಲ್ಲ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೀತಾ ಡಿಸೋಜಾ(Netta D'Souza) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳ(Bajarangadala)ದ ಹೆಸರಿನಲ್ಲಿ ಹಲವು ಕಡೆಗಳಲ್ಲಿ ದಬ್ಬಾಳಿಕೆ, ದೈಹಿಕ ಹಲ್ಲೆಗಳು ನಡೆದಿವೆ. ಇದರ ಕುರಿತು ಧ್ವನಿ ಎತ್ತಿದರೆ ಪ್ರಧಾನಿ ಮೋದಿಯಾದಿಯಾಗಿ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಲ್ಲಿಲ್ಲದ ಕೋಪ ಬರುತ್ತದೆ ಎಂದರು.

ದೇವದುರ್ಗ: ಜೆಡಿಎಸ್‌ ಪ್ರಚಾರ ವಾಹನ ಜಖಂಗೊಳಿಸಿದ ಬಿಜೆಪಿ ಕಾರ್ಯಕರ್ತರು!

ಮಹಿಳೆಯರಿಗೆ ಬಜರಂಗಿ (ಹನುಮಾನ್‌)ಯ ಅವಶ್ಯಕತೆ ಇದೆ. ಅದೇ ಬಜರಂಗದಳದ ಅವಶ್ಯಕತೆ ನಮಗಿಲ್ಲ. ಇವರು ಜನರಲ್ಲಿ ಕೋಮುದ್ವೇಷ ಹುಟ್ಟಿಸುತ್ತಾ, ಜಾತಿ ಜಾತಿಗಳ ನಡುವೆ ವೈಷಮ್ಯ ಬೆಳೆಸುತ್ತಾ ಸಮಾಜದಲ್ಲಿ ಅಶಾಂತಿ, ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ಹಾಗಾಗಿ, ಇವರ ಮೇಲೆ ಮಹಿಳೆಯರು ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಎಲ್ಲರಂತೆ ಮಹಿಳೆಯರು ನಿರ್ಭೀತಿಯಿಂದ ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಮಹಿಳೆಯರ ಕಲ್ಯಾಣಕ್ಕೆ ಬೇಕಾದ ವ್ಯವಸ್ಥೆ, ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಸರ್ಕಾರ ಮಹಿಳೆಯರ ಏಳ್ಗೆಗೆ ಶ್ರಮಿಸುವುದರೊಂದಿಗೆ ಅವರ ಕಲ್ಯಾಣಕ್ಕೆ ಬೇಕಾದ ಸೌಕರ್ಯ ಕಲ್ಪಿಸಲು ಬದ್ಧವಾಗಿದೆ.

ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆಯ ಅಡಿ .2000 ಗ್ಯಾರಂಟಿ ಯೋಜನೆ ರೂಪಿಸಿದೆ. ಹಾಗೆಯೇ ಅಧಿಕಾರಕ್ಕೆ ಬಂದ ಕೂಡಲೇ ಮಹಿಳೆಯರಿಗೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ರಾಜ್ಯದ 10 ಜಿಲ್ಲೆಗಳಲ್ಲಿ ಸಂಚರಿಸಿದ್ದು, ಎಲ್ಲೆಡೆ ಕಾಂಗ್ರೆಸ್‌ ಪರ ಅಲೆಯಿದೆ. ಎಲ್ಲ ಕ್ಷೇತ್ರಗಳಲ್ಲಿ ಈಗಾಗಲೇ ಮನೆಮನೆಗೆ ತೆರಳಿ ಪ್ರಚಾರ ಕಾರ್ಯ ಆರಂಭವಾಗಿದ್ದು, ಹೋದ ಎಲ್ಲ ಕಡೆಗಳಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

ಈ ವೇಳೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ದೀಪಾ ಗೌರಿ, ಡಾ. ಸ್ಮಿತಾ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!