ಭ್ರಷ್ಟಾಚಾರ ಆರೋಪ: ದಿಢೀರ್ ರಾಜೀನಾಮೆ ಕೊಟ್ಟ ಸಚಿವ...!

Published : Nov 19, 2020, 04:47 PM IST
ಭ್ರಷ್ಟಾಚಾರ ಆರೋಪ: ದಿಢೀರ್ ರಾಜೀನಾಮೆ ಕೊಟ್ಟ ಸಚಿವ...!

ಸಾರಾಂಶ

ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದರಿಂದ ನೂತನ ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಟ್ನಾ, (ನ.19): ಭ್ರಷ್ಟಾಚಾರ ಆರೋಪ ಸಚಿವರೊಬ್ಬರ ಹುದ್ದಯನ್ನೇ ನುಂಗಿದೆ. ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಮುಸ್ಲಿಂ ಸಚಿವರಿಲ್ಲದೆ ನಿತೀಶ್ ಸಂಪುಟ, ಅಸಲಿಗೆ ಒಬ್ಬ ಶಾಸಕನೂ ಇಲ್ಲ! 

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮದೇ ಸಂಪುಟ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಪ್ರಶ್ನಿಸಿತ್ತು.

ಇದರ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ನವೆಂಬರ್ 16ರಂದು ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮೇವಾಲಾಲ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಚರ್ಚಿಸಿದ್ದರು.

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇವರ ಜೊತೆ ಬಿಜೆಪಿಯ ಮೇವಾ ಲಾಲ್ ಚೌಧರಿ ಸಹ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಘೋಷಣೆ
ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!