
ಬೆಂಗಳೂರು (ಅ. 19): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣಾಗೆ (Assembly Elections 2023) ರಾಜಕೀಯ ಪಕ್ಷಗಳು ಈಗಾಗಲೇ ರಣಕಹಳೆ ಮೊಳಗಿಸಿವೆ. ಚುನಾವಣೆಯ ಕಾವು ಜೋರಾಗಿದ್ದು ಪ್ರಮುಖ ಮೂರು ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿವೆ. ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ (BJP) ಮತಬೇಟೆ ಶುರು ಮಾಡಿದ್ರೆ, ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ (Congress) ಅಖಾಡಕ್ಕಿಳಿದಿದೆ. ಇತ್ತ ಜೆಡಿಎಸ್ (JDS) ಜನತಾ ಮಿತ್ರ ಮೂಲಕ ಚುನಾವಣಾ ರಣಕಹಳೆ ಊದಿದ್ದು, ನವೆಂಬರ್ 1 ರಿಂದ ಪಂಚರತ್ನ ಯಾತ್ರೆ ಶುರು ಮಾಡಲಿದೆ.
ಈ ವಾರದ ನ್ಯೂಸ್ ಅವರ್ ಸ್ಪೇಷಲ್ನಲ್ಲಿ ರಣೋತ್ಸಾಹದಲ್ಲಿರೋ ಕಾಂಗ್ರೆಸ್ ಕುದುರೆಯನ್ನ ಕಟ್ಟಿ ಹಾಕುತ್ತಾ ಕೇಸರಿ ಪಡೆ? ಯಾವ ಕಾರಣಕ್ಕೆ ಬಿಜೆಪಿಗೆ ಮತ ಹಾಕಬೇಕು ಮತದಾರ? ಬಡವರ ಮನೆ ಒಡೆದು, ಶ್ರೀಮಂತರಿಗೆ ಹೆದರಿತಾ ಸರ್ಕಾರ? ಬೆಂಗಳೂರು ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕೈಗೊಂಡ ಕ್ರಮಗಳೇನು? ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಬಿಜೆಪಿ ನಾಯಕ ಹಾಗೂ ಕಂದಾಯ ಸಚಿವ ಆರ್ ಆಶೋಕ್ ಉತ್ತರಿಸಿದ್ದಾರೆ.
ರಾಯಚೂರು: ಅರಕೇರಾದಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಕುಂಭ, ಕಳಸ ಹೊತ್ತ ಮಹಿಳೆಯರಿಂದ ಸ್ವಾಗತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.