ಗ್ಯಾರಂಟಿ ಬಗ್ಗೆ ದೇಶಪಾಂಡೆ ಸತ್ಯ ಹೇಳಿದ್ದಾರೆ, ಹೆಚ್‌ಡಿಕೆ ಮೇಲೆ ಮಾಟ ಮಾಡಿರೋ ಹೇಳಿಕೆ, ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

Published : Oct 13, 2025, 05:04 PM IST
Nikhil Kumaraswamy

ಸಾರಾಂಶ

ಹಿರಿಯ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ಅವರ ಗ್ಯಾರಂಟಿ ಸರ್ಕಾರದ ಅಸಮಾಧಾನವನ್ನು ನಿಖಿಲ್ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಕುಂಠಿತವಾಗಿದೆ ಎಂದಿರುವ ಅವರು, ತಂದೆಯ ಮೇಲಿನ ಮಾಟದ ಆರೋಪವನ್ನು ತಳ್ಳಿಹಾಕಿ, 'ಕಾಯಕವೇ ಕೈಲಾಸ' ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಹಿರಿಯ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ಅವರು ಗ್ಯಾರಂಟಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರ ಬಗ್ಗೆ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ದೇಶಪಾಂಡೆ ಹೇಳಿದ್ರಲ್ಲಿ ತಪ್ಪೇನಿಲ್ಲ. ಸರ್ಕಾರದ ವಾಸ್ತವ ಅಂಶವನ್ನ ಅವರು ತೆರೆದಿಟ್ಟಿದ್ದಾರೆ. ದೊಡ್ಡ ಗಾತ್ರ ಬಜೆಟ್ ಕೊಟ್ಟಿದ್ದೇವೆ ಅಂತ ಹೇಳ್ತಾರೆ. ಅದರಲ್ಲಿ ಗ್ಯಾರಂಟಿಗಳಿಗೆ ಇಟ್ಟಿದ್ದಾರೆ. ಇಲ್ಲಿವರೆಗೂ ಪ್ರತಿ ತಿಂಗಳು ಸಮರ್ಪಕವಾಗಿ ಗ್ಯಾರಂಟಿಗಳನ್ನ ಕೊಟ್ಟಿಲ್ಲ. ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೆಚ್‌ ಡಿ ಕುಮಾರಸ್ವಾಮಿ ಮೇಲೆ ಮಾಟ ಮಾಡಲಾಗಿದ್ಯಾ?

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಮೇಲೆ ಮಾಟ ಮಾಡಿಸಲಾಗಿದೆ ಎಂಬ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ವಿಚಾರವಾಗಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಇದ್ಯಾವುದರಲ್ಲೂ ನಂಬಿಕೆ ಇಟ್ಕೊಂಡಿಲ್ಲ. ನಮಗೆ ಗೊತ್ತಿರೋದು ಒಂದೇ ಕಾಯಕವೇ ಕೈಲಾಸ ಅಂತ. ನಾವು ಶಿವನ ಆರಾಧಕರು ಭಕ್ತಿ ಪೂರಕವಾಗಿ ಪೂಜೆ ಮಾಡ್ತೀವಿ. ಅವರು ಹೇಳಿರುವುದರ ಬಗ್ಗೆ ನನಗೆ ಗೊತ್ತಿಲ್ಲ. ಕರ್ಮ ಅನ್ನೋದು ಎಲ್ಲರಿಗೂ ಗೊತ್ತು. ನಾವು ಏನ್ ಮಾಡ್ತೀವೋ ಅದು ನಮಗೆ ವಾಪಸ್ ಕೊಡುತ್ತೆ. ನನಗೆ ಈ ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಎಲ್ಲಾ ಗೊತ್ತಿಲ್ಲ. ಅದನ್ನ ಗಂಭೀರವಾಗಿ ತೆಗೆದುಕೊಳ್ಳೋದು ಬೇಡ ಎಂದರು.

ಡಿನ್ನರ್ ಮೀಟಿಂಗ್  ಏನ್ ಆಗುತ್ತೆ ಅಂತ ಕಾದು ನೋಡೋಣ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು ಕಾದು ನೋಡೋಣ ಏನ್ ಆಗುತ್ತೆ ಅಂತ. ಬಿಹಾರ್ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿ ಆಗಿದೆ. ಏನೇನ್ ತೀರ್ಮಾನ ಆಗುತ್ತೆ ಕಾದು ನೋಡೋಣ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ