ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಅತೃಪ್ತಿ: ಶಾಸಕ ಕಂದಕೂರ ಜತೆ ನಿಖಿಲ್‌ ಸಂಧಾನ

Published : Sep 29, 2023, 09:32 AM IST
ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಅತೃಪ್ತಿ: ಶಾಸಕ ಕಂದಕೂರ ಜತೆ ನಿಖಿಲ್‌ ಸಂಧಾನ

ಸಾರಾಂಶ

ಶಾಸಕ ಶರಣಗೌಡ ಕಂದಕೂರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅದನ್ನು ಪಕ್ಷದ ವರಿಷ್ಠರ ಗಮನಕ್ಕೂ ಸಹ ತಂದಿದ್ದೇನೆ. ಎಚ್‌.ಡಿ.ಕುಮಾರಸ್ವಾಮಿ ಸಹ ಶರಣಗೌಡ ಜೊತೆಗೆ ಮಾತಾಡಿದರು. ಕೆಲವು ಆತಂಕಗಳ ಬಗ್ಗೆ ಚರ್ಚೆಯಾಗಿದ್ದು, ಎಲ್ಲಾ ಸುಖಾಂತ್ಯ ಆಗಿದೆ: ನಿಖಿಲ್‌ ಕುಮಾರಸ್ವಾಮಿ 

ಬೆಂಗಳೂರು(ಸೆ.29):  ಲೋಕಸಭೆ ಚುನಾವಣೆಗೆ ಬಿಜೆಪಿ ಜತೆ ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್‌ ವಿಧಾನಸಭಾ ಕ್ಷೇತ್ರದ ತಮ್ಮ ಪಕ್ಷದ ಯುವ ಶಾಸಕ ಶರಣಗೌಡ ಕಂದಕೂರ ಅವರ ಮನವೊಲಿಕೆಗೆ ಜೆಡಿಎಸ್‌ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಯತ್ನಿಸಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಶರಣಗೌಡ ಕಂದಕೂರ ಅವರೊಂದಿಗೆ ನಿಖಿಲ್‌ ಸಂಧಾನ ಸಭೆ ನಡೆಸಿದರು. ಈ ವೇಳೆ ಶರಣಗೌಡ ಅವರು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಅಸಮಾಧಾನಕ್ಕೆ ಇರುವ ಕಾರಣಗಳನ್ನು ವಿವರಿಸಿದರು. ಕ್ಷೇತ್ರದಲ್ಲಿ ಬಿಜೆಪಿ ಪ್ರಮುಖ ಎದುರಾಳಿ ಆಗಿದ್ದು, ಚುನಾವಣೆ ಸಮಯದಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂಬ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಜೆಪಿ- ದಳ ಮೈತ್ರಿಗೆ ಅಲ್ಪಸಂಖ್ಯಾತರ ಅಸಮಾಧಾನ: ಜೆಡಿಎಸ್‌ ಬಿಡ್ಬೇಕಾ?, ಕುತೂಹಲ ಮೂಡಿಸಿದ ಇಬ್ರಾಹಿಂ ನಡೆ

ಸುಧೀರ್ಘ ಕಾಲ ನಡೆದ ಸಂಧಾನಸಭೆಯಲ್ಲಿ ನಿಖಿಲ್‌ ಅವರು ಸಹ ಪಕ್ಷದ ಸಿದ್ಧಾಂತಕ್ಕೆ ಯಾವುದೇ ಸಮಸ್ಯೆಯಾಗದಂತೆ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ಯಾವುದೇ ರೀತಿಯ ಆತುರ ತೀರ್ಮಾನಗಳನ್ನು ಕೈಗೊಳ್ಳದಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಂಧಾನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಶಾಸಕ ಶರಣಗೌಡ ಕಂದಕೂರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅದನ್ನು ಪಕ್ಷದ ವರಿಷ್ಠರ ಗಮನಕ್ಕೂ ಸಹ ತಂದಿದ್ದೇನೆ. ಎಚ್‌.ಡಿ.ಕುಮಾರಸ್ವಾಮಿ ಸಹ ಶರಣಗೌಡ ಜೊತೆಗೆ ಮಾತಾಡಿದರು. ಕೆಲವು ಆತಂಕಗಳ ಬಗ್ಗೆ ಚರ್ಚೆಯಾಗಿದ್ದು, ಎಲ್ಲಾ ಸುಖಾಂತ್ಯ ಆಗಿದೆ ಎಂದು ಹೇಳಿದರು.

ಶಾಸಕ ಶರಣಗೌಡ ಮಾತನಾಡಿ, ಮೈತ್ರಿಗೆ ಸಂಬಂಧಿಸಿದಂತೆ ಎಲ್ಲಾ ವಿಚಾರ ಚರ್ಚೆ ಮಾಡಿದ್ದೇವೆ. ನನ್ನ ಅಭಿಪ್ರಾಯ ಕೇಳಿ ಪಕ್ಷದ ವರಿಷ್ಠರು ಯುವನಾಯಕರನ್ನು ಕಳುಹಿಸಿದ್ದಾರೆ. ಮಾತುಕತೆ ವೇಳೆ ಅಭಿಪ್ರಾಯ ತಿಳಿಸಿದ್ದೇನೆ. ನನಗೆ ಸಮಾಧಾನ ಆಗಿದೆ ಎನ್ನುವುದಕ್ಕಿಂತ ಪಕ್ಷದ ನಾಯಕರ ಮಾತು ಸಹ ಕೇಳುತ್ತೇನೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ: ಸರ್ಕಾರಕ್ಕೆ ಸಿ.ಟಿ.ರವಿ ಸವಾಲು