ಚಾಮರಾಜನಗರ: ಪಾದಯಾತ್ರೆ ಕೈ ಬಿಟ್ಟು ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದ ನಿಖಿಲ್

Published : Feb 17, 2023, 09:38 AM ISTUpdated : Feb 17, 2023, 10:23 AM IST
ಚಾಮರಾಜನಗರ: ಪಾದಯಾತ್ರೆ ಕೈ ಬಿಟ್ಟು ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದ ನಿಖಿಲ್

ಸಾರಾಂಶ

ತಾಳಬೆಟ್ಟಕ್ಕೆ ತಡವಾಗಿ ಆಗಮಿಸಿದ್ದರಿಂದ ದೇವಾಸ್ಥಾನ ಬಾಗಿಲು ಮುಚ್ಚುವ ಹಿನ್ನಲೆಯಲ್ಲಿ ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ. 

ಚಾಮರಾಜನಗರ(ಫೆ.17):  ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆ ಕೈ ಬಿಟ್ಟು ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟದ ವರೆಗೆ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ತೆರಳಬೇಕಿತ್ತು. ನಿಖಿಲ್ ಕುಮಾರಸ್ವಾಮಿ ಕೈಗೊಂಡಿದ್ದ 2ನೇ ವರ್ಷದ ಪಾದಯಾತ್ರೆ ಇದಾಗಿದೆ. 

Karnataka Politics : 500ಕ್ಕೂ ಅಧಿಕ ಮಂದಿ ಬಿಜೆಪಿ ನಾಯಕರು ಜೆಡಿಎಸ್‌ಗೆ

ಹನೂರು ಕ್ಷೇತ್ರದ ಹಲವು ಗ್ರಾಮಗಳಲ್ಲಿ ನಿಖಿಲ್ ಕುಮಾರಸ್ವಾಮಿ ಸಂಚಾರ ನಡೆಸಿದ್ದಾರೆ. ಕಾರ್ಯಕರ್ತರ ಸಮಾವೇಶ ಮುಗಿಸಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಹೊರಟಿದ್ದರು. ಆದರೆ, ನಿಖಿಲ್ ಕುಮಾರಸ್ವಾಮಿ ತಾಳಬೆಟ್ಟಕ್ಕೆ ತಡವಾಗಿ ಆಗಮಿಸಿದ್ದರು. ದೇವಾಸ್ಥಾನ ಬಾಗಿಲು ಮುಚ್ಚುವ ಹಿನ್ನಲೆ, ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಮಾದಪ್ಪನ ದರ್ಶನ ಪಡೆದ ಬಳಿಕ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿಖಿಲ್ ಜೊತೆಗೆ ಫೋಟೋ ತೆಗೆಸಿಕೊಳ್ಳಲೂ ಜನರು ಮುಗಿಬಿದ್ದಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ