
ನವದೆಹಲಿ: ಒಡಿಶಾ, ಬಿಹಾರ, ಹರ್ಯಾಣದ 11 ರಾಜ್ಯಸಭಾ ಸ್ಥಾನಗಳಿಗಾಗಿ ಸೋಮವಾರ ನಡೆದಿದ್ದು, ಬಿಹಾರದಲ್ಲಿ ಎಲ್ಲಾ 5 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. 10 ರಾಜ್ಯಗಳ 37 ಸ್ಥಾನಗಳಗಾಗಿ ಚುನಾವಣೆ ನಡೆದಿದ್ದು, ಈ ಪೈಕಿ ಈಗಾಗಲೇ 26 ಜನರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 11 ಸ್ಥಾನಗಳಿಗಾಗಿ ಸೋಮವಾರ ಚುನಾವಣೆ ನಡೆದಿತ್ತು.
ಬಿಹಾರದಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಜೆಡಿಯು ಅಧ್ಯಕ್ಷ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಸಚಿವ ಜೆಡಿಯುನ ರಾಮ್ನಾಥ್ ಠಾಕೂರ್, ಬಿಜೆಪಿಯ ಶಿವೇಶ್ ಕುಮಾರ್, ಆರ್ಎಲ್ಎಂ ಅಧ್ಯಕ್ಷ ಉಪೇಂದ್ರ ಕುಶ್ವಾಹ ವಿಜೇತರಾಗಿದ್ದಾರೆ. ಬಿಜೆಪಿ- ಜೆಡಿಯುಗೆ 4 ಸ್ಥಾನ ಗೆಲ್ಲುವ ಅವಕಾಶ ಇತ್ತು, ಆದರೆ ವಿಪಕ್ಷ ಇಂಡಿಯಾ ಕೂಟದ 3 ಸದಸ್ಯರು ಮತದಾನಕ್ಕೆ ಗೈರಾದ ಕಾರಣ ಎನ್ಡಿಎ ಕೂಟ ತನ್ನ 5ನೇ ಅಭ್ಯರ್ಥಿಯನ್ನು ಸುಲಭವಾಗಿ ಗೆಲ್ಲಿಸಿಕೊಂಡಿದೆ.
ಇನ್ನು ಒಡಿಶಾದ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್ ಸಮಲ್, ಹಾಲಿ ರಾಜ್ಯಸಭಾ ಸದಸ್ಯ ಸುಜೀತ್ ಕುಮಾರ್ ಕಣಕ್ಕೆ ಇಳಿದಿದ್ದಾರೆ. ಇನ್ನು ಬಿಜೆಪಿ ಬೆಂಬಲದಿಂದ ಕಣಕ್ಕೆ ಇಳಿದಿದ್ದ ಮಾಜಿ ಕೇಂದ್ರ ಸಚಿವ, ಪಕ್ಷೇತರ ಅಭ್ಯರ್ಥಿ ದಿಲೀಪ್ ರೇ ಕೂಡಾ ಗೆಲುವು ಸಾಧಿಸಿದ್ದಾರೆ. ಬಿಜೆಡಿಯ ಸಂತೃಪ್ತ್ ಮಿಶ್ರಾ ಗೆಲುವು ಸಾಧಿಸಿದ್ದಾರೆ.
ರಾಜ್ಯದ 2 ಸ್ಥಾನಗಳಿಗೆ ಬಿಜೆಪಿಯಿಂದ ಸಂಜಯ್ ಭಾಟಿಯಾ, ಕಾಂಗ್ರೆಸ್ನ ಕರ್ಮವೀರ್ ಸಿಂಗ್, ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಬೆಂಬಲಿತ ಸತೀಶ್ ನಂದಾಲ್ ಕಣಕ್ಕೆ ಇಳಿದಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಗೌಪ್ಯತೆ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಕಾರಣ ಮತ ಎಣಿಕೆ ವಿಳಂಬವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.