ಪ್ರಧಾನಿಯಾಗಲು ಸಾಕಷ್ಟು ಬಾರಿ ಆಫರ್‌ ಬಂದಿತ್ತು: ‘ರಾಜಕೀಯ ಬಾಂಬ್‌’ ಸಿಡಿಸಿದ ಕೇಂದ್ರ ಸಚಿವ

Published : Sep 28, 2024, 09:14 AM IST
 ಪ್ರಧಾನಿಯಾಗಲು ಸಾಕಷ್ಟು ಬಾರಿ ಆಫರ್‌ ಬಂದಿತ್ತು: ‘ರಾಜಕೀಯ ಬಾಂಬ್‌’ ಸಿಡಿಸಿದ ಕೇಂದ್ರ ಸಚಿವ

ಸಾರಾಂಶ

ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತೊಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಾಲ್ಕನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದ್ದರು. ನಂತರ ಅದನ್ನು ತಮಾಷೆ ಎಂದು ಸ್ಪಷ್ಟನೆ ನೀಡಿದ್ದರು.

 

ಮುಂಬೈ: ಕಳೆದ ಲೋಕಸಭೆ ಚುನಾವಣೆ ಬಳಿಕ ಪ್ರತಿಪಕ್ಷದ ನಾಯಕರೊಬ್ಬರಿಂದ ತಮಗೆ ಪ್ರಧಾನಿಯಾಗಲು ಆಫರ್‌ ಬಂದಿತ್ತು ಎಂದು ಹೇಳುವ ಮೂಲಕ ‘ರಾಜಕೀಯ ಬಾಂಬ್‌’ ಸಿಡಿಸಿದ್ದ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಇದೀಗ ‘ನನಗೆ ಒಂದಲ್ಲ, ಹಲವು ಬಾರಿ ಈ ಆಫರ್‌ ಬಂದಿತ್ತು’ ಎಂದು ಹೇಳಿ ಪುನಃ ಸಂಚಲನ ಮೂಡಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ಸಂವಾದದ ವೇಳೆ ಗಡ್ಕರಿ ಬಳಿ ಪ್ರೇಕ್ಷಕರೊಬ್ಬರು, ‘ಜೂನ್‌ನಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ಪ್ರಧಾನಿಯಾಗಲು ಆಫರ್‌ ಬಂದಿತ್ತು ಎಂದಿದ್ದೀರಿ. ಅದರ ಬಗ್ಗೆ ವಿವರ ನೀಡುತ್ತೀರಾ’ ಎಂದು ಕೇಳಿದರು.

ಪಿಎಂ ಹುದ್ದೆಗೆ ಸ್ಪರ್ಧಿಸಿದರೆ ಬೆಂಬಲಿಸುವುದಾಗಿ ಹೇಳಿದ್ರು, ಆದರೆ ... :ನಿತಿನ್ ಗಡ್ಕರಿ ಹೇಳಿದ್ದೇನು?

ಅದಕ್ಕೆ ಉತ್ತರಿಸಿದ ಗಡ್ಕರಿ, ‘ಲೋಕಸಭೆ ಚುನಾವಣೆಗೂ ಮುನ್ನ ಹಾಗೂ ನಂತರ ನನಗೆ ಪ್ರಧಾನಿಯಾಗಲು ಅನೇಕ ಬಾರಿ ಆಫರ್‌ ಬಂದಿತ್ತು. ಹೆಚ್ಚಿನ ಮಾಹಿತಿ ಬೇಕಿದ್ದರೆ ಪತ್ರಕರ್ತರು ಸಂಗ್ರಹಿಸಲಿ. ನಾನು ನನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಧಾನಿಯಾಗುವ ಆಫರ್‌ ಸ್ವೀಕರಿಸುವ ಪ್ರಶ್ನೆಯೇ ಇಲ್ಲ. ಪ್ರಧಾನಿಯಾಗುವುದು ನನ್ನ ಗುರಿಯಲ್ಲ. ನಾನು ನನ್ನ ಸಿದ್ಧಾಂತ ಮತ್ತು ಬದ್ಧತೆಗಾಗಿ ರಾಜಕಾರಣದಲ್ಲಿದ್ದೇನೆ’ ಎಂದು ಹೇಳಿದರು.

ಇಂದಿನದು ಬರೀ ಪವರ್ ಪೊಲಿಟಿಕ್ಸ್‌:

ಈ ನಡುವೆ ಶುಕ್ರವಾರ ಇನ್ನೊಂದು ಸಮಾಂಭದಲ್ಲಿ ಮಾತನಾಡಿದ ಗಡ್ಕರಿ, ಅಂದು ರಾಜಕೀಯ ಎಂದರೆ ಅದು ದೇಶ ಕಟ್ಟುವ, ಅಭಿವೃದ್ಧಿಯ ಹಾಗೂ ಸಮಾಜ ಸೇವೆ ಉದ್ದೇಶ ಹೊಂದಿತ್ತು. ಇಂದಿನದು ಕೇವಲ ಅಧಿಕಾರ ರಾಜಕೀಯ (ಪವರ್‌ ಪೊಲಿಟಿಕ್ಸ್) ಎಂದರು.

ನಮಗೆ 4ನೇ ಬಾರಿ ಅಧಿಕಾರ ಅನುಮಾನ: ಗಡ್ಕರಿ ‘ತಮಾಷೆ’!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌