ಜೆಡಿಎಸ್ ಜತೆ ಮೈತ್ರಿ ಬಗ್ಗೆ ಕಡ್ಡಿ ಮುರಿದಂತೆ ಹೇಳಿದ ಸಿದ್ದರಾಮಯ್ಯ..!

Published : Mar 14, 2021, 06:56 PM IST
ಜೆಡಿಎಸ್ ಜತೆ ಮೈತ್ರಿ ಬಗ್ಗೆ ಕಡ್ಡಿ ಮುರಿದಂತೆ ಹೇಳಿದ ಸಿದ್ದರಾಮಯ್ಯ..!

ಸಾರಾಂಶ

ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಮೈಸೂರು, (ಮಾ.14) : ಇನ್ನು ಮುಂದೆ ಜೆಡಿಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಇಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ

 ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೆ. ಇನ್ನು ಮುಂದೆ ಮೈತ್ರಿ ಇಲ್ಲ ಕಡ್ಡಿ ಮುರಿದಂತೆ ಹೇಳಿದರು.

 ಜಿ.ಟಿ.ದೇವೇಗೌಡ್ರಿಗೆ ಜೆಡಿಎಸ್ ಬಾಗಿಲು ಬಂದ್..!

ಇದೇ ವೇಳೆ ರಮೇಶ್ ಜಾರಕಿಹೊಳಿ ಸಿ.ಡಿ.ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಸಿದ್ದು,  ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಡಿಕೆಶಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದು ಅವರಿಗೆ ಅನ್ನಿಸಿರಬಹುದು. ನನ್ನನ್ನು ಸಿಕ್ಕಿಸುತ್ತಿದ್ದಾರೆ ಅಂತ ಡಿಕೆಶಿಯೇ ಹೇಳಿದ್ದಾರೆ. ಈಗ ತನಿಖೆ ನಡೆಯುತ್ತಿದೆ. ಇಂತಹ ಪ್ರಕರಣಗಳಿಂದ ರಾಜಕಾರಣಿಗಳ ಮಾನ ಮರ್ಯಾದೆ ಹೋಗುತ್ತೆ. ಜನರು ರಾಜಕಾರಣಿಗಳ ಬಗ್ಗೆ ಹಗುರವಾಗಿ ಮಾತನಾಡಲು ಶುರು ಮಾಡ್ತಾರೆ. ಆಗ ನಾವೇನು ಮಾಡೋಕಾಗಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಘೋಷಣೆ
ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!