ಪಕ್ಷ ತೊರೆದವರ ಮರು ಸೇರ್ಪಡೆ ವಿಚಾರ : ಕೈ ನಾಯಕರ ಪ್ರತಿಕ್ರಿಯೆ

Published : Jul 04, 2021, 07:28 AM IST
ಪಕ್ಷ ತೊರೆದವರ ಮರು ಸೇರ್ಪಡೆ ವಿಚಾರ : ಕೈ ನಾಯಕರ ಪ್ರತಿಕ್ರಿಯೆ

ಸಾರಾಂಶ

ಪಕ್ಷ ತೊರೆದವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳುವ ವಿಚಾರ ಅವರು ಸಹ ನಮ್ಮನ್ನು ಭೇಟಿ ಮಾಡಿಲ್ಲ  - ಆರ್‌ ವಿ ದೇಶಪಾಂಡೆ  ಸಿಎಂ ಹುದ್ದೆಗೆ ಯಾವುದೇ ಪೈಪೋಟಿ ನಡೆದಿಲ್ಲ ಎಂದ ದೇಶಪಾಂಡೆ

ಹುಬ್ಬಳ್ಳಿ (ಜು.04): ಪಕ್ಷ ತೊರೆದವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳುವ ಕುರಿತು ಎಲ್ಲಿಯೂ ಚರ್ಚೆಯಾಗಿಲ್ಲ. ಅವರು ಸಹ ನಮ್ಮನ್ನು ಭೇಟಿ ಮಾಡಿಲ್ಲ ಎಂದು ಶಾಸಕ, ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.

 ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿರುವ 17 ಜನರು ಕಾಂಗ್ರೆಸ್‌ಗೆ ಬರುವುದಾದರೆ ಮೊದಲು ಅರ್ಜಿ ಹಾಕಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿಯಾಗಿ ಉತ್ತರಿಸಿದರು. 

ಡಿಕೆಶಿ ಹೇಳಿದ್ರು ಅಂತಾ ಕಾಂಗ್ರೆಸ್‌ಗೆ ಅರ್ಜಿ ಹಾಕೋಕಾಗುತ್ತಾ? .

ಇದೇ ವೇಳೆ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿ, ಪಕ್ಷದಲ್ಲಿ ಸಿಎಂ ಹುದ್ದೆಗೆ ಯಾವುದೇ ಪೈಪೋಟಿ ನಡೆದಿಲ್ಲ ಎಂದರು. 

ಇನ್ನು ಸಿಎಂ ಹುದ್ದೆಗೆ ಕುರಿತು ಚರ್ಚೆ ನಡೆಯುತ್ತಿದೆಯೆಂದರೆ ಅದು ಪಕ್ಷಕ್ಕಿರುವ ಡಿಮ್ಯಾಂಡ್‌ ಅಲ್ವಾ ಎಂದು ಹಾಸ್ಯ ಚಟಾಕಿ ಹಾರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ವಿದ್ಯಾವಂತೆ.. ನಲಪಾಡ್ ಕೈಹಿಡಿದ ಮಲಿಹಾ ಫಾತಿಮಾ ಯಾರು?
ಮದುವೆ ಸಂಭ್ರಮದಲ್ಲಿ ನಲಪಾಡ್.. ಅದ್ದೂರಿ ಕಾರ್‍ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್, ಸುದೀಪ್, ಯಶ್ ಭಾಗಿ