ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಬಡವರಿಗಿಲ್ಲ ಮನೆ: ಎಂ.ಬಿ.ಪಾಟೀಲ

Published : Apr 09, 2023, 11:00 PM IST
ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಬಡವರಿಗಿಲ್ಲ ಮನೆ: ಎಂ.ಬಿ.ಪಾಟೀಲ

ಸಾರಾಂಶ

ಈ ಸರ್ಕಾರದಲ್ಲಿ ಹೊಸ ಮನೆಗಳ ನಿರ್ಮಾಣ ಮಾಡವುದನ್ನು ಬಿಡಲಿ, ನಾನಾ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳಿಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಎಂ.ಬಿ.ಪಾಟೀಲ.   

ವಿಜಯಪುರ(ಏ.09): ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಬಡವರಿಗಾಗಿ ಒಂದೂ ಹೊಸ ಮನೆ ನಿರ್ಮಿಸಿಲ್ಲ. ಚುನಾವಣೆ ಬಳಿಕ ನಾವು ಮತ್ತೆ ಅಧಿಕಾರಕ್ಕೆ ಬಂದು ಬಡ ಜನರಿಗೆ ಸೂರು ಒದಗಿಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲುಕಿನ ಕಣಮುಚನಾಳ, ಧನ್ಯಾಳ ಮತ್ತು ತಿಗಣಿಬಿದರಿ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿ, ಈ ಸರ್ಕಾರದಲ್ಲಿ ಹೊಸ ಮನೆಗಳ ನಿರ್ಮಾಣ ಮಾಡವುದನ್ನು ಬಿಡಲಿ, ನಾನಾ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳಿಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

2013-18ರ ಅವಧಿಯಲ್ಲಿ ನಾವು ಅಧಿಕಾರದಲ್ಲಿದ್ದಾಗ 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೇವೆ. ಜನರ ಕಲ್ಯಾಣಕ್ಕಾಗಿ ಅನ್ನ ಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆದರೆ, ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಸೇರಿದಂತೆ ಅಭಿವೃದ್ಧಿ ಕುಂಠಿತವಾಗಿರುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಹೇಳಿದರು.

Karnataka Assembly Elections 2023: ಕಾಂಗ್ರೆಸ್‌-ಬಿಜೆಪಿಯಲ್ಲಿ ಟಿಕೆಟ್‌ಗೆ ಹೈವೋಲ್ಟೇಜ್‌ ಫೈಟ್‌..!

ಅಭಿವೃದ್ಧಿ ಮಾಡಿದವರನ್ನು ಬೆಂಬಲಿಸಿ ಪ್ರೋತ್ಸಾಹಿಸಿದರೆ ಹೆಚ್ಚಿಗೆ ಕೆಲಸ ಮಾಡಲು ಹುಮ್ಮಸ್ಸು ಸಿಗುತ್ತದೆ. ಆದರೆ, ಯಾವುದೇ ಕೆಲಸ ಮಾಡದವರನ್ನು ಬೆಂಬಲಿಸಿದರೆ ಏನು ಪ್ರಯೋಜನವಿಲ್ಲ. ಜನರು ಆ ತಪ್ಪನ್ನು ಮಾಡಬಾರದು. ಕೆಲಸ ಮಾಡುವವರಿಗೆ ಗೌರವ ನೀಡಬೇಕು ಎಂದು ಅವರು ಹೇಳಿದರು.

ಕಣಮುಚನಾಳ ಗ್ರಾಮಕ್ಕೆ ಈ ಹಿಂದೆ ಸೇತುವೆ ನಿರ್ಮಾಣ ಮಾಡಿದ್ದೇನೆ. ಸಿ.ಸಿ.ರಸ್ತೆ ಮಾಡಿದ್ದೇನೆ. ಮನೆ ಮನೆಗಳಿಗೆ ಕುಡಿಯುವ ನೀರು ಸಿಗಲು ವ್ಯವಸ್ಥೆ ಮಾಡಿದ್ದೇನೆ. ಅಷ್ಟೇ ಅಲ್ಲ, ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಗೆ .250 ಕೋಟಿ ಅನುದಾನ ಮೀಸಲಿಟ್ಟು ಇದೇ ಯೋಜನೆಯಡಿ ಈ ಭಾಗದ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಂಡಿದ್ದೇನೆ. ಸಣ್ಣ ಗ್ರಾಮ, ದೊಡ್ಡ ಗ್ರಾಮ ಎಂದು ಯಾವುದೇ ಭೇದ-ಭಾವವಿಲ್ಲದೆ ಅಭಿವೃದ್ಧಿ ಮಾಡಿದ್ದೇನೆ. ಮುಂದೆಯೂ ಅಭಿವೃದ್ಧಿ ಮಾಡುತ್ತೇನೆ ಎಂದು ಎಂ.ಬಿ.ಪಾಟೀಲ ತಿಳಿಸಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!