ಬಿಜೆಪಿಯಲ್ಲಿ ಯಾವುದೇ ಲಾಬಿ ಮಾಡಿಲ್ಲ : ಸುಧಾಕರ್

Kannadaprabha News   | Asianet News
Published : Dec 20, 2019, 09:57 AM IST
ಬಿಜೆಪಿಯಲ್ಲಿ ಯಾವುದೇ ಲಾಬಿ ಮಾಡಿಲ್ಲ : ಸುಧಾಕರ್

ಸಾರಾಂಶ

ನಾನು ಯಾವುದೇ ರೀತಿಯ ಲಾಬಿ ಮಾಡಿಲ್ಲ. ಯಾವುದೇ ರೀತಿಯ ಲಾಬಿ ಮಾಡುವ ಅಗತ್ತವೂ ನನಗಿಲ್ಲ ಎಂದು ಬಿಜೆಪಿ ಶಾಸಕ ಸುಧಾಕರ್ ಹೇಳಿದರು. 

ಚಿಕ್ಕಬಳ್ಳಾಪುರ [ಡಿ.20]: ನಾನು ಯಾವುದೇ ಖಾತೆಗಾಗಿ ವರಿಷ್ಠರ ಬಳಿ ಲಾಬಿ ಮಾಡಿಲ್ಲ ಮುಂದೆಯೂ ಮಾಡುವುದಿಲ್ಲ, ಜಿಲ್ಲೆಯ ಜನತೆಯ ಹಸನು ಮಾಡುವ ಖಾತೆ ನೀಡಲು ಮುಕ್ಯಮತ್ರಿಗಳು ಸಿದ್ಧರಿದ್ದು, ಈ ವಿಚಾರದಲ್ಲಿ ಯಾವುದೇ ಲಾಬಿ ಅಗತ್ಯವಿಲ್ಲ ಎಂದು ಶಾಸಕ ಡಾ.ಕೆ. ಸುಧಾಕರ್‌ ಅಭಿಪ್ರಾಯಪಟ್ಟರು.

ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಧನುರ್‌ ಮಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪುಣ್ಯ ಕಾಲದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಉದ್ಧೇಶದಿಂದ ಮುಂದೂಡಲಾಗಿದ್ದು, ಧನುರ್‌ ಮಾಸ ಮುಗಿದ ಕೂಡಲೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.

ಜನರೇ ಛೀಮಾರಿ ಹಾಕಲಿದ್ದಾರೆ:  ಕಾನೂನಿನ ಅರಿವಿಲ್ಲದ, ದೇಶದ ಮೇಲೆ ಪ್ರೀತಿ ಇಲ್ಲದ ಕಾಂಗ್ರೆಸ್‌ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ರಂಪಾಟ ನಡೆಸುತ್ತಿದೆ. ದೇಶದ 120 ಕೋಟಿ ಜನರಿಗೆ ಯಾವುದೇ ರೀತಿಯ ತೊಂದರೆಯಾಗದ ಕಾಯ್ದೆ ಕುರಿತು ಅನಗತ್ಯ ಗೊಂದಲ ಸೃಷ್ಟಿಮಾಡಲಸಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಸಾಂತ್ಯಕ್ಕೆ ಕೆಪಿಸಿಸಿಗೆ ಹೊಸ ಬಾಸ್‌ : ರೇಸ್ ನಲ್ಲಿ ಯಾರು.....

ದೇಶದ ಯಾವೊಬ್ಬ ಪ್ರಜೆಗೂ ಈ ಕಾಯ್ದೆಯಿಂದ ಅನ್ಯಾಯಾ ಆಗುವುದಿಲ್ಲ, ಸತ್ಯ, ಕಾನೂನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್‌ ಮುಗ್ದ ಜನರ ಮತ್ತು ಸರ್ಕಾರದ ಆಸ್ತಿಗೆ ಹಾನಿ ಮಾಡುವ ಕೆಲಸಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಜನರೇ ಕಾಂಗ್ರೆಸ್‌ಗೆ ಛೀಮಾರಿ ಹಾಕಲಿದ್ದಾರೆ ಎಂದರು. ಪ್ರಸ್ತುತ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಶಾಂತಿ ಕಾಪಾಡಬೇಕಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದು ಉತ್ತಮ ಕ್ರಮ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ