ಬಿಜೆಪಿಯಲ್ಲಿ ನೈತಿಕ ಪೊಲೀಸ್‌ಗಿರಿ ಇಲ್ಲ: ಖಾದರ್‌ಗೆ ಸಚಿವ ಮಾಧುಸ್ವಾಮಿ ತಿರುಗೇಟು

Published : Dec 10, 2022, 10:56 PM IST
ಬಿಜೆಪಿಯಲ್ಲಿ ನೈತಿಕ ಪೊಲೀಸ್‌ಗಿರಿ ಇಲ್ಲ: ಖಾದರ್‌ಗೆ ಸಚಿವ ಮಾಧುಸ್ವಾಮಿ ತಿರುಗೇಟು

ಸಾರಾಂಶ

ಬಿಜೆಪಿಯಲ್ಲಿ ಹೈಕಮಾಂಡ್ ಬಹಳ ಪ್ರಬಲವಾಗಿದೆ, ನೈಪುಣ್ಯತೆಯಿಂದ ಇದೆ. ಚುನಾವಣೆ ಹೇಗೆ ಮಾಡಬೇಕು, ಯಾರನ್ನು ಚುನಾವಣೆಗೆ ನಿಲ್ಲಿಸಬೇಕು, ಯಾರಿಗೆ ನಾಯಕತ್ವ ಕೊಡಬೇಕು, ಏನು ಮಾಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ‌ ಮಾಧುಸ್ವಾಮಿ 

ಉತ್ತರಕನ್ನಡ(ಡಿ.10):  ನಾವು ಸರ್ಕಾರ ನಡೆಸುತ್ತಿರುವುದು ಎಲ್ಲರಿಗೂ ಹೊರತು ಯಾರೋ ಒಬ್ಬರಿಗೆ ಅಲ್ಲಾ. ಸರ್ಕಾರದ ಮುಂದೆ ಎಲ್ಲರೂ ಒಂದೇ, ಸಾರ್ವಜನಿಕರಿಗೋಸ್ಕರ ಸರ್ಕಾರ ನಡೆಸುತ್ತಿದ್ದೇವೆ. ನಮ್ಮ ಪಕ್ಷದಲ್ಲಿ ನೈತಿಕ ಪೊಲೀಸ್‌ಗಿರಿ ಇಲ್ಲ.‌ ನಮ್ಮ ಪಕ್ಷ ಇದೆ ಎಂದು ಯಾರಾದರೂ ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ನಾವು ಸಹಿಸಲ್ಲ. ಯಾರಾದರೂ ಕಾನೂನು ಮೀರಿ ಹೋದ್ರೆ ಅನುಭವಿಸುತ್ತಾರೆ ಅಷ್ಟೇ ಎಂದು ಕಾನೂನು ಸಚಿವ ಮಾಧುಸ್ವಾಮಿ  ತಿಳಿಸಿದ್ದಾರೆ.

ಅನೈತಿಕ ಗೂಂಡಾಗಿರಿ ಮಾಡುವವರೇ ಸರ್ಕಾರ ನಿಯಂತ್ರಿಸ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಯು.ಟಿ.ಖಾದರ್ ಹೇಳಿಕೆಗೆ ಇಂದು(ಶನಿವಾರ) ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Mangaluru Moral Policing: ಸುಳ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ

ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ಕೊಡುವ ಸಾಧ್ಯತೆ ಕುರಿತು ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ಬಿಜೆಪಿಯಲ್ಲಿ ಹೈಕಮಾಂಡ್ ಬಹಳ ಪ್ರಬಲವಾಗಿದೆ, ನೈಪುಣ್ಯತೆಯಿಂದ ಇದೆ. ಚುನಾವಣೆ ಹೇಗೆ ಮಾಡಬೇಕು, ಯಾರನ್ನು ಚುನಾವಣೆಗೆ ನಿಲ್ಲಿಸಬೇಕು, ಯಾರಿಗೆ ನಾಯಕತ್ವ ಕೊಡಬೇಕು, ಏನು ಮಾಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಮ್ಮ ಕಡೆಯಿಂದ ಹೇಳಿಸಿಕೊಳ್ಳುವ ಸ್ಥಿತಿಯಲ್ಲಿ ಹೈಕಮಾಂಡ್ ಇಲ್ಲ. ಹೈಕಮಾಂಡ್ ಏನು ಸೂಚನೆ ಕೊಡುತ್ತೆ ಅದರ ಮೇಲೆ ಚುನಾವಣೆ ಮಾಡುತ್ತೇವೆ ಎಂದು ಸಚಿವ‌ ಮಾಧುಸ್ವಾಮಿ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ