ಸತ್ಯವನ್ನು ಯಾರೂ ಮರೆಮಾಚಲು ಆಗಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದೇನು?

Published : Dec 07, 2023, 09:23 PM IST
ಸತ್ಯವನ್ನು ಯಾರೂ ಮರೆಮಾಚಲು ಆಗಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದೇನು?

ಸಾರಾಂಶ

ಹೈಕಮಾಂಡ್‌ ನ.30ರಂದು ಮಾತನಾಡುವಂತೆ ಟೈಮ್‌ ಕೊಟ್ಟಿತ್ತು. ಅಂದು ನಾನು ಹೋಗಿರಲಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್‌ ಯಾವ ರೀತಿ ಸರಿಪಡಿಸುವ ಚಿಂತನೆ ಮಾಡುತ್ತೋ ನೋಡೋಣ. ಹೈಕಮಾಂಡ್‌ ಚಿಂತನೆ ಆದ ಮೇಲೆ ಮುಂದಿನದ್ದನ್ನು ನೋಡೋಣ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು. 

ತುಮಕೂರು (ಡಿ.07): ಹೈಕಮಾಂಡ್‌ ನ.30ರಂದು ಮಾತನಾಡುವಂತೆ ಟೈಮ್‌ ಕೊಟ್ಟಿತ್ತು. ಅಂದು ನಾನು ಹೋಗಿರಲಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್‌ ಯಾವ ರೀತಿ ಸರಿಪಡಿಸುವ ಚಿಂತನೆ ಮಾಡುತ್ತೋ ನೋಡೋಣ. ಹೈಕಮಾಂಡ್‌ ಚಿಂತನೆ ಆದ ಮೇಲೆ ಮುಂದಿನದ್ದನ್ನು ನೋಡೋಣ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾನು ಸ್ವತಂತ್ರವಾಗಿ ಬೆಂಗಳೂರಿನಲ್ಲಿ ಗೆದ್ದು ಬಂದಿದ್ದವನು. ಕೆಲ ಸಂದರ್ಭದಲ್ಲಿ ನಮ್ಮ ದುರಂಹಕಾರ ನಮಗೆ ತೊಂದರೆ ಕೊಟ್ಟಿತು. 

ನಾನು ಮಾಡಿದ ಒಂದು ತೀರ್ಮಾನ ನನಗೆ ಮುಳುವಾಯಿತು. ಮೇಲೆ ಆಕಾಶವಿದೆ ಅಂತ ಆಕಾಶಕ್ಕೆ ಉಗುಳಿದೆ. ಅದು ನನ್ನ ಮೇಲೆ ಬಿದ್ದಿದೆ. ಅದನ್ನು ಒರಸಿಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು. ಇದೇ ವೇಳೆ ಡಿ.7-8ರಂದು ಹೈಕಮಾಂಡ್‌ ಭೇಟಿ ಕುರಿತು ತಾವು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತ ಪ್ರಶ್ನೆಗೆ, ನೋಡೋಣ ಎಂದಷ್ಟೇ ಉತ್ತರಿಸಿದರು. 

ನಾಯಿ-ನರಿಗಳಿಂದ ವ್ಯತ್ಯಾಸ: 45 ವರ್ಷ ಸಿದ್ಧಗಂಗಾ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಒಂದಲ್ಲ, ಎರಡಲ್ಲ ಹತ್ತಾರು ಕಾರ್ಯಕ್ರಮಗಳನ್ನು ಮಾಡಿದ್ದೇನೆ.  ಪಾರ್ಟಿ ಗೀಟಿ ಅನ್ನುವುದು ಈ ವೇಳೆ ನನ್ನ ತಲೆಯಲ್ಲೇ ಇರಲ್ಲ. ಇತ್ತೀಚಿನ ದಿನಗಳಲ್ಲಿ ನಾಯಿ, ನರಿಗಳಿಂದ ಸ್ವಲ್ಪ ವ್ಯತ್ಯಾಸವಾಗಿದೆ ಎಂದು ಹೇಳುವ ಮೂಲಕ ತಮ್ಮ ಗುರುಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜಕೀಯ ಥಳಕು ಹಾಕಿಕೊಂಡಿರುವ ಕುರಿತು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು. ಜತೆಗೆ ಗುರುಗಳ ಮುಂದೆ ಬಂದಿದ್ದೇನೆ, ನೋವು ತೋಡಿಕೊಂಡಿದ್ದೇನೆ ಎಂದ ಅ‍ವರು, ಸತ್ಯವನ್ನು ಯಾರೂ ಮರೆಮಾಚಲು ಆಗಲ್ಲ. ಎರಡ್ಮೂರು ದಿನ ಕಾಯಿರಿ, ಆ ಬಳಿಕ ಮುಂದಿನ ವಿಚಾರ ನೋಡೋಣ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ 24 ಸ್ಥಳಗಳಲ್ಲಿ ಫುಟ್ ಓವರ್ ಬ್ರಿಡ್ಜ್ ನಿರ್ಮಾಣ: ಸಚಿವ ಸತೀಶ್‌ ಜಾರಕಿಹೊಳಿ

ಪರಮೇಶ್ವರ್‌ ಅವರು ತಮ್ಮನ್ನು ಹೊಗಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಯಾವತ್ತೂ ಅಧೈರ್ಯವಂತ ಆಗಿಲ್ಲ. ಪರಮೇಶ್ವರ್ ಜೊತೆಗೆ ನನಗೆ 50 ವರ್ಷದ ಸ್ನೇಹವಿದೆ. ಅವರು ನನ್ನ ಬಗ್ಗೆ ಮಾತನಾಡಿದ್ದಾರೆಂದರೆ ಅದು ಅವರ ದೊಡ್ಡತನ. ರಾಜಕಾರಣವೇ ಬೇರೆ, ವೈಯಕ್ತಿಕ ಸಂಬಂಧವೇ ಬೇರೆ ಎಂದರು. ಪಕ್ಷದ ಕುರಿತು ಯತ್ನಾಳ್‌ ವ್ಯಕ್ತಪಡಿಸಿರುವ ಅಸಮಾಧಾನ ಕುರಿತ ಪ್ರಶ್ನೆಗೆ, ಯತ್ನಾಳ್ ಒಬ್ಬ ಸುಸಂಸ್ಕೃತ ರಾಜಕಾರಣಿ ಈಗ ನೇರವಾಗಿ ಹೇಳುವಂತಹವರು ಯಾರಿದ್ದಾರೆ? ಅವರ ನೋವನ್ನು ನೇರವಾಗಿ ತೋಡಿಕೊಂಡಿದ್ದಾರೆ. ಯತ್ನಾಳ್ ಅವರನ್ನು ಇತ್ತೀಚೆಗೆ ಭೇಟಿಯಾಗಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ