ಜಾರಕಿಹೊಳಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಬಾಲಚಂದ್ರ ಗುಡುಗು

Published : Dec 12, 2023, 06:12 AM IST
ಜಾರಕಿಹೊಳಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಬಾಲಚಂದ್ರ ಗುಡುಗು

ಸಾರಾಂಶ

ದೇವರ ಆಶೀರ್ವಾದ, ಜನರ ಬೆಂಬಲದಿಂದ ನಮ್ಮ ಜಾರಕಿಹೊಳಿ ಸಾಮ್ರಾಜ್ಯವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ, ಕೆಎಂಎಫ್‌ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗುಡುಗಿದರು.

ಮೂಡಲಗಿ (ಡಿ.12) :  ದೇವರ ಆಶೀರ್ವಾದ, ಜನರ ಬೆಂಬಲದಿಂದ ನಮ್ಮ ಜಾರಕಿಹೊಳಿ ಸಾಮ್ರಾಜ್ಯವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ, ಕೆಎಂಎಫ್‌ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗುಡುಗಿದರು.

ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಭಾನುವಾರ ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜಾರಕಿಹೊಳಿ ಸಾಮ್ರಾಜ್ಯವನ್ನು ಕೆಡವಲು ಕೆಲವರು ಇನ್ನಿಲ್ಲದ ಪ್ರಯತ್ನ ಮಾಡುತ್ತ ಸೋಲುತ್ತಲೇ ಇದ್ದಾರೆ. ನಮಗಿರುವ ಜನ ಬೆಂಬಲದಿಂದ ಈಗ ಅವರು ತಣ್ಣಗಾಗಿದ್ದಾರೆ ಎಂದು ಲೇವಡಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿಯ 24 ಸ್ಥಳಗಳಲ್ಲಿ ಫುಟ್ ಓವರ್ ಬ್ರಿಡ್ಜ್ ನಿರ್ಮಾಣ: ಸಚಿವ ಸತೀಶ್‌ ಜಾರಕಿಹೊಳಿ

2019ರಲ್ಲಿ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಅರಭಾವಿ ಮತಕ್ಷೇತ್ರದ ನದಿತೀರದ ಗ್ರಾಮಗಳಿಗೆ ಸುಮಾರು 9 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಇದು ಬಿಜೆಪಿ ಸರ್ಕಾರದಲ್ಲಿ ನನಗೆ ನೀಡಿರುವ ಅತ್ಯಧಿಕ ಮನೆಗಳಾಗಿವೆ. ಆದರೂ ಇನ್ನೂ ಕೆಲವರು ಮನೆಗಳ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಶೇ.90ರಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೂ ಕೆಲವರಿಗೆ ಸಹಿಸಲು ಆಗುತ್ತಿಲ್ಲ ಎಂದು ತಿಳಿಸಿದರು.

ಕಳೆದ 3 ದಶಕಗಳಿಂದ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ ಅವರಿಗೆ ಶಕ್ತಿಯಾಗಿ ನಾವು ನಿಂತಿದ್ದೇವೆ. ಜನರು ಕೂಡಾ ನಮ್ಮೊಂದಿಗೆ ಕೈ ಜೋಡಿಸುತ್ತಿದ್ದಾರೆ. ಎಲ್ಲ ಸಮಾಜಗಳಿಗೂ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಮುಂತಾದ ಸೌಲಭ್ಯಗಳನ್ನು ದೊರಕಿಸಿ ಕೊಟ್ಟಿದ್ದೇವೆ. ನಮ್ಮಿಂದ ಯಾವ ಸಮಾಜಕ್ಕೂ ಅನ್ಯಾಯವಾಗಿಲ್ಲ ಎಂದು ತಿಳಿಸಿದರು.

ಮೂಡಲಗಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು. ಸಣ್ಣಪುಟ್ಟ ಸಮಾಜವಿರಲಿ, ದೊಡ್ಡ ಸಮಾಜವಿರಲಿ ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ. ಇದರ ಜೊತೆಗೆ ಆಯಾ ಸಮಾಜಗಳ ಬೇಡಿಕೆಗಳಿಗೂ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅಗತ್ಯವಾಗಿದೆ. ಇವುಗಳನ್ನು ಮೈಗೂಡಿಸಿಕೊಂಡರೇ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಶಿಕ್ಷಣದಿಂದ ಸಮಾಜ ಪರಿವರ್ತನೆ ಹೊಂದಲು ಸಾಧ್ಯ.ಇಂದಿನ ಯುವ ಪೀಳಿಗೆಗೆ ಹಿಂದಿನ ಗತಕಾಲದ ಇತಿಹಾಸ, ವೈಭವ ಪರಂಪರೆ ತಿಳಿಸಬೇಕಾಗಿದೆ. ಮಹಾನ್ ಪುರುಷರ ತತ್ವಾದರ್ಶಗಳನ್ನು ಕೂಡಾ ಅವರಿಗೆ ತಿಳಿಸಿ ಜಾಗೃತಿಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಸಮಾಜಗಳಿಗೆ ಸೇರಿರುವ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಪ್ರತಿವರ್ಷವೂ ಆಯೋಜನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಪ್ರದೇಶ ಕುರುಬರ ಸಂಘದ ನಿರ್ದೇಶಕ ರಾಜೇಂದ್ರ ಸಣ್ಣಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಮಾಜವು ಅತ್ಯಂತ ವಿಶ್ವಾಸಾರ್ಹವಾಗಿದೆ. ನಮ್ಮ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯನವರು ಪ್ರಶ್ನಾತೀತ ನಾಯಕರು. ಇಡೀ ಕುರುಬ ಸಮಾಜವು ಅವರ ಬೆಂಬಲಕ್ಕಿದೆ. ಜೊತೆಗೆ ಜಾರಕಿಹೊಳಿ ಸಹೋದರರೊಂದಿಗೆ ನಾವೆಲ್ಲರೂ ಗುರುತಿಸಿಕೊಂಡಿದ್ದೇವೆ. ನಮ್ಮ ಸಮಾಜಕ್ಕೆ ಜಾರಕಿಹೊಳಿ ಸಹೋದರರು ದೊಡ್ಡ ಶಕ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.

ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು, ಕವಲಗುಡ್ಡದ ಅಮರೇಶ್ವರ ಮಹಾರಾಜರು ವಹಿಸಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಕಳ್ಳಿಗುದ್ದಿ-ಕಪರಟ್ಟಿಯ ಬಸವರಾಜ ಸ್ವಾಮಿಗಳು ಹಿರೇಮಠ, ಜೋಕಾನಟ್ಟಿಯ ಬಿಳಿಯಾನಸಿದ್ಧ ಸ್ವಾಮಿಗಳು, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಮುಖಂಡರಾದ ವಿಠ್ಠಲ ಪಾಟೀಲ, ಕೆಂಚನಗೌಡ ಪಾಟೀಲ, ಡಾ.ಎಸ್.ಎಸ್.ಪಾಟೀಲ, ಭೀಮಶಿ ಮಗದುಮ್, ಲಕ್ಷ್ಮಣ ಮಸಗುಪ್ಪಿ, ಶಿವನಗೌಡ ಪಾಟೀಲ, ಬಸಗೌಡ ಪಾಟೀಲ, ರಾಮಣ್ಣ ಮಹಾರಡ್ಡಿ, ಮನು ಗಡಾದ, ಸಿದ್ಧಲಿಂಗಪ್ಪ ಕಂಬಳಿ, ಅಜ್ಜಪ್ಪ ಗಿರಡ್ಡಿ, ಗಿರೀಶ ಹಳ್ಳೂರ, ರಂಗಪ್ಪ ಇಟ್ಟನ್ನವರ, ಹಣಮಂತ ಗುಡ್ಲಮನಿ, ಲಕ್ಷ್ಮಣ ಗಣಪ್ಪಗೋಳ, ಶಂಕರ ಬಿಲಕುಂದಿ, ಅಡಿವೆಪ್ಪ ಅಳಗೋಡಿ, ಮಲ್ಲಿಕಾರ್ಜುನ ವಡೇರ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

ಲಕ್ಷ್ಮೀ ಹೆಬ್ಬಾಳ್ಕರ್ ಬೆಳೆದು ಬಂದಿರುವುದು ಯಾವ ರೀತಿ‌ ಎಂಬುದು ಗೊತ್ತು?: ರಮೇಶ್‌ ಜಾರಕಿಹೊಳಿ

ಇದೇ ಸಂದರ್ಭದಲ್ಲಿ ಕುರುಬ ಸಮಾಜದ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸಮಾಜದ ಅಧಿಕಾರಿಗಳನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸಮಾರಂಭದ ವೇದಿಕೆಗೆ ಕರೆ ತರಲಾಯಿತು. ಸುಣಧೋಳಿ ಗ್ರಾಮವು ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಗಳ ಮುಖಂಡರು ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಎಲ್ಲ ಸಮುದಾಯಗಳ ಆಶೀರ್ವಾದದಿಂದ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಿಂದ ಜಯಗಳಿಸಲಾಗಿದೆ. ಹಾಲುಮತ ಸಮಾಜ ಬಾಂಧವರು ತಮ್ಮ ಜಾತಿಯ ಅಭ್ಯರ್ಥಿ ನೋಡದೇ ನನ್ನನ್ನು ಗೆಲ್ಲಿಸಿದ್ದಾರೆ. ಕುರುಬ ಸಮಾಜದವರೊಬ್ಬರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರೂ ಇದಾವದನ್ನು ಲೆಕ್ಕಿಸದೇ ಸಮಾಜದವರು ನನಗೆ ಅಮೂಲ್ಯ ಮತ ನೀಡಿ ಗೆಲ್ಲಿಸಿ ಕೊಟ್ಟಿದ್ದಾರೆ. ಹಾಲುಮತ ಕುರುಬ ಸಮಾಜ ಸೇರಿದಂತೆ ಎಲ್ಲ ಸಮಾಜಗಳು ನನಗೆ ಬೆಂಬಲ ನೀಡಿದ್ದಾರೆ. ಬೆಂಬಲ ನೀಡಿದ ಸರ್ವ ಸಮಾಜದ ಬಾಂಧವರಿಗೆ ನನ್ನ ನಮನಗಳು.

-ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಭಾವಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ