
ಬೆಳಗಾವಿ(ಸೆ.15): ಆಪಾದನೆ ಬಂದಾಗ ಎಲ್ಲ ಮುಖ್ಯಮಂತ್ರಿಗಳು ನಾನೇ ಮುಂದುವರಿಯುತ್ತೇನೆ ಎನ್ನುತ್ತಾರೆ. ನನ್ನ ವಿರುದ್ಧ ತೀರ್ಪು ಬರುತ್ತದೆ. ನಾನು ರಾಜೀನಾಮೆ ಕೊಟ್ಟು ಹೋಗುತ್ತೇನೆಂದು ಯಾವ ಮುಖ್ಯಮಂತ್ರಿಯೂ ಹೇಳುವುದಿಲ್ಲ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ರಾಜೀನಾಮೆ ಕೊಡುವವರು ಹೇಳಬೇಕು, ಹೇಳುತ್ತಾರಷ್ಟೇ. ಕೊನೆಗೆ ಅವರ ಹಣೆಬರಹ ಕೋರ್ಟ್ನಲ್ಲಿ ಆಗುತ್ತದೆ ಎಂದರು. ನಾಗಮಂಗಲದ ಗಲಭೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ರಾಜ್ಯದಲ್ಲಿ ಈ ರೀತಿ ಯಾರು ಗಲಭೆಗೆ ಪ್ರಚೋದನೆ ಕೊಟ್ಟವರು? ಕಲ್ಲು ತೂರಿ ಹಾನಿ ಮಾಡಿದವರ ರಕ್ಷಣೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರೇ ಗಲಭೆ ಮಾಡಿದ್ದಾರೆ. ಗಣಪತಿ ಮೆರವಣಿಗೆ ಹೋಗುತ್ತದೆ. ಅದಕ್ಕೆ ಮಸೀದಿ ಮುಂದೆ ಬರಬೇಡಿ ಎನ್ನುವ ಹಕ್ಕು ಅವರಿಗೇನಿದೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ರೇಸ್ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ: ಸಚಿವ ದಿನೇಶ್ ಗುಂಡೂರಾವ್
ನೀವು ಅವರಿಗೆ ರಕ್ಷಣೆ ಕೊಡಿ, ಮಸೀದಿಗೆ ತೊಂದರೆಯಾಗದಂತೆ ರಕ್ಷಣೆ ಕೊಡಿ. ಅದನ್ನು ಬಿಟ್ಟು ಅಲ್ಲಿ ಹೋಗಬೇಡಿ, ಇಲ್ಲಿ ಹೋಗಬೇಡಿ ಎಂದರೆ ಹೇಗೆ? ಇದು ಸ್ವತಂತ್ರ ಭಾರತ, ಇಂತವರಿಗೆ ಸಹಕಾರ ಕೊಡುವುದರಿಂದಲೇ ಇಂತಹ ಗಲಭೆ ನಡೆಯುತ್ತಿವೆ. ರಾಜ್ಯದಲ್ಲಿ ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬಂದಿದೆ, ಆಗ ರಾಜ್ಯದಲ್ಲಿ ಕೋಮು ಗಲಭೆ ಆಗಿದೆರ. ಅದಕ್ಕೆ ಇದೊಂದು ಉದಾಹರಣೆ ಎಂದು ಹೇಳಿದರು.
ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ರಕ್ಷಣೆ ನೀಡಲಾಗುತ್ತಿದೆ. ಯಾರು ತಪ್ಪು ಮಾಡಿಲ್ಲವೋ ಅವರಿಗೆ ಶಿಕ್ಷೆ ನೀಡುವುದೇ ಕಾಂಗ್ರೆಸ್ ನೀತಿಯಾಗಿದೆ. ನಾಗಮಂಗಲ ಗಲಭೆ ಸಣ್ಣಪುಟ್ಟ ಗಲಾಟೆ ಎಂಬ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನಸ್ಥಿತಿಯನ್ನು ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.