
ದಾವಣಗೆರೆ[ಡಿ.03]: ಉಪ ಚುನಾವಣೆ ಹೊಸ್ತಿಲಲ್ಲಿ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಶಾಸಕರ ಹನಿಟ್ರ್ಯಾಪ್ ಪ್ರಕರಣದ ವಿಚಾರದಲ್ಲಿ ಸರ್ಕಾರ ತನಿಖಾಧಿಗಳ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ನಡೆಯುತ್ತಿಲ್ಲ. ಹನಿಟ್ರ್ಯಾಪ್ಗೊಳಗಾದವರ ವೀಡಿಯೋಗಳನ್ನು ಡಿಲೀಟ್ ಮಾಡುವಂತೆ ಯಾರ ಮೇಲೂ ಒತ್ತಡ ಹಾಕಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳಿಗೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.
ಈ ಮೂಲಕ ಹನಿಟ್ರ್ಯಾಪ್ ವಿಡಿಯೋ ಪ್ರಕರಣದಲ್ಲಿ ಸರ್ಕಾರ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ. ಹನಿಟ್ರ್ಯಾಪ್ನಲ್ಲಿ ಸಿಲುಕಿರುವ ಶಾಸಕರ ರಕ್ಷಣೆಗೆ ಮುಂದಾಗಿದೆ ಎಂಬ ಆರೋಪವನ್ನು ಬೊಮ್ಮಾಯಿ ತಳ್ಳಿಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.