
ಹಿರೇಕೆರೂರು(ಮೇ.25): ಒಂದು ಸೋಲು 10 ಗೆಲುವಿಗೆ ಮುನ್ನುಡಿಯಾಗಲಿದೆ. ಕ್ಷೇತ್ರದ ಮತದಾರರ ಒತ್ತಾಯದಂತೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವವರೆಗೆ ರಾಜಕೀಯದಿಂದ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ತಾಲೂಕಿನ ಬಾಳಂಬೀಡ ಗ್ರಾಮದ ಗೃಹ ಕಚೇರಿಯಲ್ಲಿ ತಾಲೂಕು ಬಿಜೆಪಿ ಮಂಡಳದಿಂದ ಸೋಮವಾರ ಏರ್ಪಡಿಸಿದ್ದ ಅಭ್ಯರ್ಥಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು. ಈ ಬಾರಿ ಕ್ಷೇತ್ರದಲ್ಲಿ ಮತಯಾಚನೆ ಸಂದರ್ಭದಲ್ಲಿ ನನ್ನ ಪರ ಅಪಾರ ಬೆಂಬಲ ವ್ಯಕ್ತವಾಗಿತ್ತು. ಅದರಲ್ಲೂ ಮಹಿಳೆಯರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲ ಸೂಚಿಸಿದ್ದರು. ಆದರೆ ಒಳಗಿನ ಕೆಲ ವಿರೋಧಿ ಸಂಚು ನನ್ನನ್ನು ಸೋಲಿಸಿದೆ. ಈ ಸೋಲಿನ ಸೇಡು ತೀರಿಸಿಕೊಳ್ಳಲು ಮುಂಬರುವ ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕು. ನನ್ನ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಜೊತೆಗಿದ್ದವರೇ ಬೆನ್ನಿಗೆ ಚೂರಿ ಹಾಕುವ ಮೂಲಕ ನನ್ನನ್ನು ಸೋಲಿಸಲು ಹುನ್ನಾರ ನಡೆಸಿದರು ಎಂದರು.
ಭರ್ಜರಿ ಮದುವೆ ಊಟ ಮಾಡಿದವರಿಗೆ ವಾಂತಿ, ಬೇಧಿ: 50 ಜನರು ಆಸ್ಪತ್ರೆ ದಾಖಲು
ಈ ಕುರಿತ ದಾಖಲೆ ನನ್ನ ಬಳಿ ಇದೆ. ನಂಬಿಕೆ ದ್ರೋಹ ಮಾಡಿದವರು, ವಿಶ್ವಾಸಘಾತುಕತನ ಮಾಡಿದವರಿಗೆ ಒಳ್ಳೆಯದಾಗಲಿ. ಇಂಥವರ ಮೇಲೆ ನಿಗಾವಹಿಸಿ ಕನಿಷ್ಠ ತಾಪಂ ಚುನಾವಣೆ ಗೆಲ್ಲದ ಹಾಗೆ ನೋಡಿಕೊಳ್ಳಿ ಎಂದರು.
ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ನನ್ನ ಸೋಲಿಗೆ ಧೃತಿಗೆಡಬಾರದು. ನಾನು ಸೋತಿದ್ದೇನೆ ಹಾಗಂತ ಸತ್ತಿಲ್ಲ, ಇನ್ನೂ ಸದೃಢನಾಗಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಮನದಾಳದ ಮಾತನ್ನು ತೆರೆದಿಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.