ಅವಧಿಪೂರ್ವ ಚುನಾವಣೆ ಇಲ್ಲ, ಅಧಿಕಾರ ಪೂರೈಸುತ್ತೇವೆ: ಸಿಎಂ ಬೊಮ್ಮಾಯಿ

Published : Dec 11, 2022, 06:23 AM IST
ಅವಧಿಪೂರ್ವ ಚುನಾವಣೆ ಇಲ್ಲ, ಅಧಿಕಾರ ಪೂರೈಸುತ್ತೇವೆ: ಸಿಎಂ ಬೊಮ್ಮಾಯಿ

ಸಾರಾಂಶ

ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಕುರಿತು ಎದ್ದಿರುವ ಸುದ್ದಿಗಳನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತಳ್ಳಿಹಾಕಿದ್ದಾರೆ. 

ಮೈಸೂರು (ಡಿ.11): ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಕುರಿತು ಎದ್ದಿರುವ ಸುದ್ದಿಗಳನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತಳ್ಳಿಹಾಕಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿ ಪೂರ್ಣಗೊಳಿಸಲಿದೆ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಅವಧಿಪೂರ್ವ ಚುನಾವಣೆಗೆ ಹೋಗ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಶನಿವಾರ ಗರಂ ಆಗಿಯೇ ಪ್ರತಿಕ್ರಿಯಿಸಿದ ಅವರು, ‘ಇಂಥವನ್ನೆಲ್ಲ ನಿಮಗೆ ಯಾರು ಹೇಳ್ತಾರ್ರೀ’ ಎಂದು ಅಸಮಾಧಾನ ಹೊರಹಾಕಿದರು.

ಗುಜರಾತ್‌ ಚುನಾವಣೆ ನಂತರ ಸಹಜವಾಗಿ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಇದು ಸಹಜ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಬಿಜೆಪಿಯು ಜನಸಂಪರ್ಕ ಕಾರ್ಯ​ಕ್ರಮ ಹಾಗೂ ಪಕ್ಷ ಸಂಘಟನೆಯನ್ನು ನಿರಂತ​ರ​ವಾಗಿ ಮಾಡಿಕೊಂಡು ಬಂದಿದೆ. ಈಗ ಚುನಾವಣಾ ದೃಷ್ಟಿಯಿಂದ ಈ ಕಾರ್ಯವನ್ನು ಮತ್ತ​ಷ್ಟುಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ವಿವಿಧ ಸ್ತರಗಳ ಕೋರ್‌ ಕಮಿಟಿಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಕಳೆದ ಹಲವು ಚುನಾ​ವ​ಣೆ​ಗ​ಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆ​ಪಿಗೆ ಹಿನ್ನಡೆಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ದೊಡ್ಡಸಂಖ್ಯೆಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುತ್ತಾರೆ. ನೀವೇ ಕಾದು ನೋಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ: ಭಾರಿ ಕುತೂಹಲ

ಸಿದ್ದು ಮನೆಗೆ ಖಚಿತ: ರಾಜ್ಯದಲ್ಲಿ ನಾವು ಸುಮ್ಮನೆ ಕೂತರೂ ಕಾಂಗ್ರೆಸ್‌ ಚುನಾವಣೆ ಗೆಲ್ಲುತ್ತದೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮುಂಬರುವ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುವುದು ನಿಶ್ಚಿತ ಎಂದು ಲೇವಡಿ ಮಾಡಿದರು. ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಇದು ಅವ​ರಿಗೆ ಗೊತ್ತಾ​ಗಿ​ದ್ದರಿಂದ ಆ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಎತ್ತಿನಹೊಳೆ ವೆಚ್ಚ ಡಬಲ್‌: ಪರಿಷ್ಕೃತ ಯೋಜನಾ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ

ಗುಜರಾತ್‌ ಚುನಾವಣೆ ನಂತರ ಸಹಜವಾಗಿ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಇದು ಸಹಜ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಅವಧಿ ಪೂರ್ವ ಚುನಾವಣೆ ನಡೆಯುತ್ತೆ ಎನ್ನುವುದನ್ನೆಲ್ಲಾ ನಿಮಗೆ ಯಾರು ಹೇಳ್ತಾರೆ?
- ಬಸವರಾಜ ಬೊಮ್ಮಾಯಿ ಸಿಎಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ