
ಬೆಂಗಳೂರು(ಜು.02): ಮುಖ್ಯಮಂತ್ರಿ ಬದಲಾವಣೆ, ಉಪ ಮುಖ್ಯಮಂತ್ರಿಗಳ ನೇಮಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹುದ್ದೆಗಳ ಪ್ರಶ್ನೆಗೆ ಸೋಮವಾರ ನಗರದಲ್ಲಿ ಉತ್ತರಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ಈ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವೆಲ್ಲ ನಡೆದುಕೊಳ್ಳುತ್ತೇವೆ ಎಂದರು.
ರಾಜ, ರಾಜ್ಯ ಮತ್ತು ಕೇಂದ್ರವಾಗಲಿ ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸೋದು: ಸಿಎಂ ಸಿದ್ದರಾಮಯ್ಯ
ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರನ್ನು ಸಿಎಂ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆಗೆ, ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.