
ಮೈಸೂರು(ನ.14): ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಸುದ್ದಿಗಾರರ ಜತೆಗೆ ಮಾತ ನಾಡಿದ ಅವರು, ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಜೈಲುಪಾಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸುವ ಕುರಿತು ಬೇಡಿಕೆ ಬಂದಿದೆ. ಉಪ ಚುನಾವಣೆ ಬಳಿಕ ಆ ಕುರಿತು ನೋಡೋಣ ಎಂದು ಹೇಳಿದ್ದೇನೆ. ಅದನ್ನೇ ಸಂಪುಟ ಪುನರ್ ರಚನೆ ಎಂದು ಹೇಳಬೇಡಿ ಎ೦ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶೀಘ್ರ ಸಂಪುಟ ಪುನಾರಚನೆ ಸರ್ಕಸ್?: 6-7 ಸಚಿವರ ಸ್ಥಾನಕ್ಕೆ ಕುತ್ತು
ಡಿಸೆಂಬರಲ್ಲಿ ಸಂಪುಟ ಪುನಾರಚನೆ: ಪರಂ
ಬೆಂಗಳೂರು: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿದ್ದಾಗ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆಗ ಡಿಸೆಂಬರ್ನಲ್ಲಿ ಸಂಪುಟ ಪುನಾ ರಚನೆ ನಡೆಯಬಹುದು ಎಂಬ ಸುಳಿವು ಇತ್ತು. ಆದರೆ, ಈಗ ಏನಾಗಿದೆ ನನಗೆ ಗೊತ್ತಿಲ್ಲ. ಆ ಬಗ್ಗೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಹೇಳಿದ್ದಾರೆ. ಈ ವಿಚಾರದ ಕುರಿತು ಮುಖ್ಯಮಂತ್ರಿಯವರು ಉತ್ತರ ನೀಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.