ನಾಸಿರ್‌ ಬೇಷರತ್‌ ಕ್ಷಮೆ ಕೇಳುವವರೆಗೂ ಪ್ರಮಾಣವಚನ ಬೇಡ: ಕೇಂದ್ರ ಸಚಿವ ಜೋಶಿ

Published : Mar 09, 2024, 06:35 AM IST
ನಾಸಿರ್‌ ಬೇಷರತ್‌ ಕ್ಷಮೆ ಕೇಳುವವರೆಗೂ ಪ್ರಮಾಣವಚನ ಬೇಡ: ಕೇಂದ್ರ ಸಚಿವ ಜೋಶಿ

ಸಾರಾಂಶ

ಪಾಕಿಸ್ತಾನ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್‌ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

ಹುಬ್ಬಳ್ಳಿ(ಮಾ.09):  ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್‌ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದರು. 

ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಕೂಡ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ನಾಸೀರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು ಎಂದರು. ಇದೇ ವೇಳೆಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದೆ. ಸರಿಯಾದ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಪೂರ್ವ ತಯಾರಿ ಇಲ್ಲದೇ ಕಾಂಗ್ರೆಸ್‌ನಿಂದ ಜಾತಿ ಗಣತಿ ವರದಿ: ಪ್ರಲ್ಹಾದ್‌ ಜೋಶಿ

ಮಹದಾಯಿ ಯೋಜನೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ಮಹದಾಯಿಗೆ ಅಡ್ಡಗಾಲು ಹಾಕುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಗೋವಾಕ್ಕೆ ಹೋಗಿ ಹನಿ ನೀರು ಬಿಡಲ್ಲ ಅಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರೇ ಹೊರತು ನಾವಲ್ಲ ಎಂದು ಜೋಶಿ ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!