
ಹುಬ್ಬಳ್ಳಿ (ಸೆ.13): ಬಿಜೆಪಿಗೆ ವಿವಿಧ ರಾಜ್ಯಗಳಲ್ಲಿ ತಮ್ಮ ನಾಯಕರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದು, ಅದೆ ಕಾರಣಕ್ಕೆ ಮುಖ್ಯಮಂತ್ರಿಗಳ ಬದಲಾವಣೆಗೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ಹಾಗೂ ಹು-ಧಾ ಪಾಲಿಕೆ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೋನಾ ನಿರ್ವಹಣೆಯಲ್ಲಿ ವಿಫಲ, ಆಡಳಿತ ಸರಿಯಾಗಿಲ್ಲ, ಭ್ರಷ್ಟಾಚಾರ ಹೆಚ್ಚಿದೆ ಎಂಬೆಲ್ಲ ಕಾರಣಕ್ಕಾಗಿ ನಾಲ್ಕು ತಿಂಗಳಲ್ಲಿ ಬಿಜೆಪಿ ಮೂರು ಮುಖ್ಯಮಂತ್ರಿಗಳನ್ನು ಬದಲಿಸಿದೆ. ಕೇಂದ್ರದ ಆರೋಗ್ಯ ಸಚಿವರ ಬದಲಾವಣೆಗೂ ಇದೇ ಕಾರಣ. ಈ ಬೆಳವಣಿಗೆ ಒಟ್ಟಾರೆ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದರು.
ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಡಿಕೆಶಿ ಸುಳಿವು
ಎಐಎಂಐಎಂ ಬಿಜೆಪಿಯ ಬಿ ಟೀಂ ಆಗಿದೆ. ಬಿಜೆಪಿ ಅಧಿಕಾರ ದುರ್ಬಳಕೆ ಹಾಗೂ ನಮ್ಮ ಟಿಕೆಟ್ ಹಂಚಿಕೆಯಲ್ಲಿ ಆದ ಕೆಲ ಗೊಂದಲದ ಕಾರಣ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ. ಮಹಾನಗರ ಪಾಲಿಕೆ ಚುನಾವಣೆಯಂತೆ ವಿಧಾನಸಭೆ ಚುನಾವಣೆಯಲ್ಲಿ ಈ ಪಕ್ಷ ಯಾವುದೇ ಪ್ರಭಾವ ಬೀರದು. ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಎಐಸಿಸಿಯಿಂದ ಹೊಸ ಅಭಿಯಾನ ನಡೆಸಲಾಗುತ್ತಿದೆ. ಅದರ ಭಾಗವಾಗಿ ಮುಂದಿನ ಅಕ್ಟೋಬರ್ 2ರಿಂದ ರಾಜ್ಯಾದ್ಯಂತ ಸುಮಾರು 6 ಸಾವಿರ ಪಂಚಾಯಿತಿ, 4 ಸಾವಿರ ವಾರ್ಡ್ಗಳಲ್ಲಿ ಮಹಾತ್ಮಾ ಗಾಂಧೀಜಿಯವರ ಹೆಸರಿನಲ್ಲಿ ಕಾರ್ಯಕರ್ತರು ಸಭೆ ನಡೆಸಬೇಕು. ನಾನು ಒಂದು ತಿಂಗಳು ಪ್ರತಿದಿನ ಒಂದೊಂದು ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಕಾರ್ಯಕ್ರಮದ ಮೇಲ್ವಿಚಾರಣೆಗೆ ವೀಕ್ಷಕರನ್ನು ನೇಮಕ ಮಾಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.