ಲೋಕಸಭಾ ಚುನಾವಣೆ 2024: ರಾಜ್ಯದ ಇನ್ನೂ 14 ಕ್ಷೇತ್ರಕ್ಕೆ ಇಂದಿನಿಂದ ನಾಮಪತ್ರ ಭರಾಟೆ

Published : Apr 12, 2024, 05:24 AM IST
ಲೋಕಸಭಾ ಚುನಾವಣೆ 2024: ರಾಜ್ಯದ ಇನ್ನೂ 14 ಕ್ಷೇತ್ರಕ್ಕೆ ಇಂದಿನಿಂದ ನಾಮಪತ್ರ ಭರಾಟೆ

ಸಾರಾಂಶ

ಏಪ್ರಿಲ್‌ 12 ರ ಬೆಳಗ್ಗೆ 11 ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಪ್ರತಿದಿನ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ರಜೆ ದಿನ ಹೊರತುಪಡಿಸಿ ಇನ್ನುಳಿದ ದಿನದಲ್ಲಿ ಅಭ್ಯರ್ಥಿಗಳು ಉಮೇದುವಾರಿಕೆ ಮಾಡಬಹುದಾಗಿದೆ. ರಾಜ್ಯದ ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಇದು ಅನ್ವಯವಾಗಲಿದೆ.  

ಬೆಂಗಳೂರು(ಏ.12): ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ತೀವ್ರಗೊಂಡ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಪ್ರತಿದಿನ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ರಜೆ ದಿನ ಹೊರತುಪಡಿಸಿ ಇನ್ನುಳಿದ ದಿನದಲ್ಲಿ ಅಭ್ಯರ್ಥಿಗಳು ಉಮೇದುವಾರಿಕೆ ಮಾಡಬಹುದಾಗಿದೆ. ರಾಜ್ಯದ ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಇದು ಅನ್ವಯವಾಗಲಿದೆ.

ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲು ಇದೇ ತಿಂಗಳ 19 ಕಡೆಯ ದಿನವಾಗಿದ್ದು, 20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.22 ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ 2024: 14 ಕ್ಷೇತ್ರದಲ್ಲಿ 247 ಸ್ಪರ್ಧಿಗಳು ಕಣದಲ್ಲಿ..!

ಇದೇ ವೇಳೆ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಫೆ.25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಲೋಕಸಭಾ ಚುನಾವಣೆಯ ದಿನಗಳೇ ಉಪಚುನಾವಣೆಗೂ ಅನ್ವಯವಾಗಲಿದೆ.

ಯಾವ ಕ್ಷೇತ್ರಗಳಿಗೆ ಉಮೇದುವಾರಿಕೆ?

ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!