ಡಿಕೆಶಿ ಭೇಟಿಯಾದ ಲಿಂಗಾಯತ, ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು

Published : Jun 28, 2021, 08:08 PM IST
ಡಿಕೆಶಿ ಭೇಟಿಯಾದ ಲಿಂಗಾಯತ, ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು

ಸಾರಾಂಶ

* ಡಿ.ಕೆ. ಶಿವಕುಮಾರ್ ಅವರನ್ನು ಉತ್ತರ ಕರ್ನಾಟಕದ ಸ್ವಾಮೀಜಿಗಳು * ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಭೇಟಿ * ಈ ವೇಳೆ ಡಿಕೆ ಶಿವಕುಮಾರ್ ಸನ್ಮಾನಿಸಿದ ಸ್ವಾಮೀಜಿಗಳು

ಬೆಂಗಳೂರು, (ಜೂನ್.28): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಭೇಟಿ ಮಾಡಿದರು.

ಇಂದು (ಸೋಮವಾರ) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಗದಗದ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ 25 ಮಠಗಳ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

‘ನೆಕ್ಸ್ಟ್‌ಸಿಎಂ’ ಎಂದು ಅಭಿಮಾನಿಗಳ ಜೈಕಾರ

ಈ ವೇಳೆ ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಡಿಕೆ ಶಿವಕುಮಾರ್ ಅವರನ್ನು ಶ್ಲಾಘಿಸಿ ಸನ್ಮಾನಿಸಿ ಆಶೀರ್ವದಿಸಿದರು. 

ಹಡಪದ ಗುರುಪೀಠ, ರೆಡ್ಡಿ ಗುರುಪೀಠ, ಬಳ್ಳಾರಿ ಕಲ್ಯಾಣಮಠ, ಭೋವಿ ಗುರುಪೀಠ, ಈಡಿಗ ಗುರುಪೀಠ, ಕಡಕೋಳ ಮಠ, ಅಕ್ಕಲಕೂಟ, ಗಡಿಗೌಡಗಾಂವ, ಉಗುರಗೋಳ, ಬೊಮ್ಮನಹಳ್ಳಿ ಮಠ, ಗೋಟೂರ ಮಠ, ಅಗಡಿ ಮಠ, ಸದಾಶಿವಪೇಟೆ ಮತ್ತಿತರ ಮಠಗಳು ಶ್ರೀಗಳು ಉಪಸ್ಥಿತರಿದ್ದರು.

ಆದ್ರೆ, ದಿಢೀರ್ ಅಂತ ಸ್ವಾಮೀಜಿಗಳು ಏಕೆ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದರು ಎನ್ನುವುದು ಮಾತ್ರ ತಿಳಿದುಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯದ ಬೆಳವಣಿಗೆಯಲ್ಲಿ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ
Davanagere By-election 2026: ದಾವಣಗೆರೇಲಿ ಪಕ್ಷ ವಿರೋಧಿ ನಡೆಗೆ ಕಾಂಗ್ರೆಸ್‌ನಲ್ಲಿ ಇಬ್ಬರು ನಾಯಕರ ತಲೆದಂಡ,