
ನವದೆಹಲಿ, (ಜು.24): ಸಿಎಂ ಬಿಎಸ್ ಯಡಿಯಯೂರಪ್ಪ ಬದಲಾವಣೆ ಖಚಿತ ಎನ್ನಲಾಗುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿಬರುತ್ತಿವೆ. ಅದರಲ್ಲೂ ಮುಖ್ಯವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಸರು ಬಲವಾಗಿ ಕೇಳಿಬರುತ್ತಿದೆ.
ಈ ಬಗ್ಗೆ ಪ್ರಹ್ಲಾದ್ ಜೋಶಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಈ ಬಗ್ಗೆ ತಮ್ಮೊಂದಿಗೆ ಯಾರೂ ಮಾತನಾಡಿಲ್ಲ. ಬಿಎಸ್ವೈರನ್ನು ರಾಜೀನಾಮೆ ನೀಡಲು ಕೇಳಿದ್ದಾರೋ ಇಲ್ಲವೋ ಎಂಬ ಬಗ್ಗೆಯೂ ತಮಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಹೊಸ ಸಿಎಂ ಹುದ್ದೆ ಯಾವ ಜಾತಿಗೆ? ಮೋದಿ, ಶಾ ಹೊಸ ಪ್ರಯೋಗ?
ಯಡಿಯೂರಪ್ಪ ಸ್ಥಾನವನ್ನು ನೀವು ಪಡೆಯಬಹುದು ಎನ್ನುವುದರ ಬಗ್ಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ 'ಆ ಬಗ್ಗೆ ಯಾರೂ ನನ್ನೊಂದಿಗೆ ಮಾತನಾಡಿಲ್ಲ. ಮಾಧ್ಯಮದವರು ಮಾತ್ರ ಅದನ್ನು ಚರ್ಚಿಸುತ್ತಿದ್ದಾರೆ. ನನ್ನೊಂದಿಗೆ ಯಾರೂ ಮಾತಾಡಿಲ್ಲವಾದ್ದರಿಂದ, ಅದಕ್ಕೆ ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ' ಎಂದು ಜೋಶಿ ಉತ್ತರಿಸಿದರು.
ಕಾಲದಿಂದ ಕಾಲಕ್ಕೆ ಬೇರೆ ಬೇರೆ ನಾಯಕತ್ವ ಇದೆ. ರಾಜನಾಥ್ ಸಿಂಗ್ ಅವರಿದ್ದರು, ನಂತರ ನಿತಿನ್ ಗಡ್ಕರಿ ಬಂದರು. ಅವರ ನಂತರ ಅಮಿತ್ ಷಾ ನಾಯಕತ್ವ ವಹಿಸಿಕೊಂಡರೆ, ಈಗ ಜೆ.ಪಿ.ನಡ್ಡಾ ಇದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ವರಿಷ್ಠ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇದ್ದಾರೆ. ಅವರು ನಿರ್ಧರಿಸುತ್ತಾರೆ' ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.