Siddaramaiah resignation: 'ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ರು': ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!

Kannadaprabha News   | Kannada Prabha
Published : May 29, 2026, 04:43 AM IST
Not Just Me My Family Too Became Victims of Political Vendetta Siddaramaiah Opens Up After Resignation

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತ್ತು ತಮ್ಮ ಕುಟುಂಬದ ಮೇಲೆ ನಡೆದ ರಾಜಕೀಯ ದ್ವೇಷದ ಬಗ್ಗೆ ನೋವು ತೋಡಿಕೊಂಡಿದ್ದಾರೆ. ರಾಜಕೀಯದಿಂದ ದೂರವಿದ್ದ ತಮ್ಮ ಪತ್ನಿಯ ಮೇಲೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದರಿಂದ, ಒಂದು ಹಂತದಲ್ಲಿ ರಾಜಕೀಯ ಸನ್ಯಾಸದ ಬಗ್ಗೆ ಯೋಚಿಸಿದ್ದಾಗಿ ಅವರು ಹೇಳಿದ್ದಾರೆ.

 ಬೆಂಗಳೂರು (ಮೇ.29): ‘ನಾನು ಮಾತ್ರವಲ್ಲ ನನ್ನ ಕುಟುಂಬವೂ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ರಾಜಕಾರಣದಿಂದ ಬಹುದೂರ ಇದ್ದ ನನ್ನ ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋವು ತೋಡಿಕೊಂಡಿದ್ದಾರೆ.

ರಾಜಕೀಯ ಸನ್ಯಾಸ ಸ್ವೀಕರಿಸಬೇಕು ಎನಿಸಿತ್ತು!

ಅಲ್ಲದೆ, ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡಬೇಕು ಎನ್ನುವಷ್ಟು ಮನಸ್ಸು ನೊಂದಿತ್ತು ಎಂದಿದ್ದಾರೆ.

ಮುಖ್ಯಮಂತ್ರಿ ಅವರ ಕಚೇರಿಯಿಂದ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರ ವಿದಾಯ ಭಾಷಣ ಕುರಿತ ಪತ್ರಿಕಾ ಹೇಳಿಕೆಯಲ್ಲಿ, ‘ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ನನ್ನ ರಾಜಕೀಯ ವಿರೋಧಿಗಳು ರಾಜಕಾರಣದಿಂದ ಬಹುದೂರ ಇದ್ದು ಕುಟುಂಬದ ಪಾಲನೆ ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು’ ಎಂದು ತಿಳಿಸಲಾಗಿದೆ.

ಶತ್ರುಗಳ ದಾಳಿಗೆ ಪಲಾಯನವಾದಿಯಾಗಬೇಡ

ಒಂದು ಹಂತದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಎನಿಸಿತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ. ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ, ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೆಡಿಎಸ್‌ಗೆ ಸೇರಿದ ಬೆನ್ನಲ್ಲೇ ದೇವೇಗೌಡರ ಕಾಲು ಹಿಡಿದು ಆಶೀರ್ವಾದ ಪಡೆದ ಯುವನಾಯಕಿ ಬಿಗ್‌ಬಾಸ್‌ ಜಾಹ್ನವಿ
EXCLUSIVE: ದೆಹಲಿ ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿದ ಡಿ.ಕೆ. ಶಿವಕುಮಾರ್! ಹೈಕಮಾಂಡ್‌ಗೆ ನೀಡಲಿರುವ 'ಡಿಕೆಶಿ ಟೀಮ್'ನಲ್ಲಿ ಯಾರಿದ್ದಾರೆ?