
ಶಿವಮೊಗ್ಗ (ಮಾ.1) : ಪಕ್ಷ ನನಗೆ ಸಾಕಷ್ಟುಅವಕಾಶಗಳನ್ನು ನೀಡಿದೆ. ಪಕ್ಷದ ಋುಣ ತೀರಿಸುವುದು ನನ್ನ ಕರ್ತವ್ಯ. ರಾಜ್ಯದ ಉದ್ದಗಲಕ್ಕೂ ಪ್ರವಾಸ ನಡೆಸಿ ಪಕ್ಷ ಬಲಪಡಿಸುವುದರೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ. ಆ ದಿಕ್ಕಿನಲ್ಲಿ ನಾಳೆಯಿಂದಲೇ ಪ್ರವಾಸ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yadiyurappa) ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಚುನಾವಣೆ(Assembly election)ಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆಯೇ ಹೊರತು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿಲ್ಲ. ಯಡಿಯೂರಪ್ಪ ಮನೆಯಲ್ಲಿ ಕೂತಿದ್ದಾನೆಂದು ಯಾರೂ ಭಾವಿಸುವ ಅಗತ್ಯವಿಲ್ಲ. ಈಗಾಗಲೇ ನಾನು ಹೇಳಿದಂತೆ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಂಡು ಪಕ್ಷವನ್ನು ಇನ್ನಷ್ಟುಬಲಪಡಿಸುತ್ತೇನೆ ಎಂದು ತಿಳಿಸಿದರು.
Assembly election: ಬಿಎಸ್ವೈ ಬಗ್ಗೆ ನಮ್ರತೆ ಇದ್ರೆ ಮತ್ತೆ ಸಿಎಂ ಮಾಡಿ: ಡಿಕೆಶಿ
ನನ್ನ ಕೈ, ಕಾಲು ಗಟ್ಟಿಇರುವ ತನಕ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಅದು ನನ್ನ ಕರ್ತವ್ಯ. ನನ್ನ ಕೊನೇ ಉಸಿರು ಇರುವವರೆಗೂ ಪಕ್ಷದ ಪರ ಕೆಲಸ ಮಾಡಿದರೂ ಅದು ಕಡಿಮೆಯೇ. ಆ ಭರವಸೆಯನ್ನು ಜನರಿಗೆ ನೀಡುತ್ತೇನೆ ಎಂದರು.
ಪ್ರಧಾನಿ ಮೋದಿ(PM Narendra Modi)ಯವರು ತುಂಬಾ ಆತ್ಮೀಯವಾಗಿ ನನ್ನ ಬಳಿ ನಡೆದುಕೊಂಡಿದ್ದಾರೆ. ಮೊದಲಿನಿಂದಲೂ ನನ್ನ ಬಗ್ಗೆ ಅವರಿಗೆ ತುಂಬಾ ವಿಶ್ವಾಸವಿದೆ, ಆತ್ಮೀಯತೆ ಇದೆ. ಅವರು ತೋರಿದ ಪ್ರೀತಿ-ವಿಶ್ವಾಸ ಮರೆಯಲು ಸಾಧ್ಯವಿಲ್ಲ. ನಾನು ಅವರಿಗೆ ಸದಾ ಋುಣಿ. ಮುಂಬರುವ ದಿನದಲ್ಲಿ ಅವರ ಅಪೇಕ್ಷೆಯಂತೆ ಪಕ್ಷವನ್ನು ಇನ್ನಷ್ಟುಬಲಪಡಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಅದೇ ಅವರಿಗೆ ನಾನು ನೀಡುವ ಕೊಡುಗೆ ಎಂದರು.
ಜೆಡಿಎಸ್ ಹಳ್ಳ ಹಿಡಿಯಲು ಇಬ್ರಾಹಿಂ ಹೇಳಿಕೆಗಳೇ ಸಾಕು: ಅಶ್ವತ್ಥನಾರಾಯಣ ವ್ಯಂಗ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.