ಸಿಎಂಗೆ 4ನೇ ರಾಜಕೀಯ ಕಾರ್ಯದರ್ಶಿ ನೇಮಕ: ಪಿಎ ಆಗಿದ್ದವರಿಗೆ ಈಗ ಸಂಪುದ ದರ್ಜೆ ಸ್ಥಾನಮಾನ..!

Published : May 28, 2020, 04:46 PM ISTUpdated : May 28, 2020, 07:18 PM IST
ಸಿಎಂಗೆ 4ನೇ ರಾಜಕೀಯ ಕಾರ್ಯದರ್ಶಿ ನೇಮಕ: ಪಿಎ ಆಗಿದ್ದವರಿಗೆ ಈಗ ಸಂಪುದ ದರ್ಜೆ ಸ್ಥಾನಮಾನ..!

ಸಾರಾಂಶ

ಸಿಎಂಗೆ ನಾಲ್ಕನೇ ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿಯಾಗಿದ್ದು, ಈ ಹಿಂದೆ ಪಿಎ ಆಗಿದ್ದವರನ್ನ ಇದೀಗ ಸಂಪುಟ ದರ್ಜೆ ಸ್ಥಾನಮಾನ ನೀಡಿ ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಯಾರವರು..?

ಬೆಂಗಳೂರು, (ಮೇ.28): ಸಿಎಂ ನಾಲ್ಕನೇ ರಾಜಕೀಯ ಕಾರ್ಯದರ್ಶಿ ನೇಮಕವಾಗಿದೆ.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ಇದೆ.

"

ಈಗಾಗಲೇ ಎಸ್ಆರ್ ವಿಶ್ವನಾಥ್, ಎಂ.ಪಿ.ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಅವರು ಸಿಎಂ ಬಿಎಸ್‌ವೈ ಅವರ ರಾಜಕೀಯ ಕಾರ್ಯದರ್ಶಿಗಳಿದ್ದಾರೆ.

ಬಿಎಸ್‌ವೈ ವಿರುದ್ಧ ನಾನು ಪತ್ರ ಬರೆದಿಲ್ಲ: ಸಂತೋಷ್‌ ಆಣೆ

ಸಂತೋಷ್ ಈಗ ಸಿಎಂ ರಾಜಕೀಯ ಕಾರ್ಯದರ್ಶಿ


ಹೌದು.. ಯಡಿಯೂರಪ್ಪ ಅವರು ತಮ್ಮ ಆಪ್ತ ಸಹಾಯಕರಾಗಿದ್ದ (PA)  ಎನ್.ಆರ್.ಸಂತೋಷ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ  ಮಾಡಿ ಸಿಎಂ ಸಹಿ ಇರುವ ಆದೇಶ ಪತ್ರ ಸುವರ್ಣ ನ್ಯೂಸ್.ಕಾಂಗೆ ಸಿಕ್ಕಿದೆ.

 ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸಂತೋಷ್ ಅವರನ್ನು ತಮ್ಮ ರಾಜಕೀಯ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಲು ಆದೇಶಿಸಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖವಾಗಿದ್ದು, ಇಂದು (ಗುರುವಾರ) ಸಂಜೆ ವೇಳೆ ಅಧಿಕೃತ ಆದೇಶ ಹೊರಬೀಳುವ ಎಲ್ಲಾ ಸಾಧ್ಯತೆಗಳಿವೆ.

ಮಧ್ಯರಾತ್ರಿ ಬಿಎಸ್'ವೈ ಮನೆಯಲ್ಲಿ ಪೊಲೀಸ್ ಹುಡುಕಾಟ: ನಂತರ ಪೊಲೀಸ್ ಆಯುಕ್ತರಿಗೆ ಯಡಿಯೂರಪ್ಪ ಪತ್ರ

 ಸಂತೋಷ್ ಅವರು ಯಡಿಯೂರಪ್ಪನವರ ಆಪ್ತ ಸಹಾಯಕರಾಗಿದ್ದರು. ಬಿಎಸ್‌ವೈ ಸಿಎಂ ಆದ ಬಳಿಕ ಸಂತೋಷ್ ನಾಪತ್ತೆಯಾಗಿದ್ದರು. ಇದೀಗ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿದ್ದು, ಕೆಲವರ ವಿರೋಧಕ್ಕೆ ಕಾರಣವಾಗಿದೆ. 

ಇನ್ನು ಇದೇ ಸಂತೋಷ್ ಹಾಗೂ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯ ವಿನಯ್ ನಡುವೆ ದೊಡ್ಡ ಗಲಾಟೆಯೇ ನಡೆದಿದ್ದು, ಅದು ಈಶ್ವರಪ್ಪ ಹಾಗೂ ಯಡಿಯೂರಪ್ಪ ನಡುವೆ ವೈಯಕ್ತಿಕ ಜಂಗೀ ಕುಸ್ತಿಗೆ  ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ