ಸಿಎಂ ಜನಪ್ರಿಯತೆ ಹೆಚ್ಚಾದಂತೆ ಅಡೆತಡೆ ಸಹಜ: ಎಚ್.ಕೆ ಪಾಟೀಲ್

Published : Nov 07, 2024, 07:31 AM IST
ಸಿಎಂ ಜನಪ್ರಿಯತೆ ಹೆಚ್ಚಾದಂತೆ ಅಡೆತಡೆ ಸಹಜ: ಎಚ್.ಕೆ ಪಾಟೀಲ್

ಸಾರಾಂಶ

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂಬುದು ಬಿಜೆಪಿ ಅವರು ಒತ್ತಾಯ ಮಾಡುತ್ತಿದ್ದಾರೆ. ಅದರಂತೆ ಚುನಾವಣಾ ಬಾಂಡ್ ಹಗರಣದಲ್ಲಿ ಪ್ರಧಾನಿಗಳೂ ರಾಜೀನಾಮೆ ನೀಡಬೇಕಲ್ಲವೇ ಎಂದು ಪ್ರಶ್ನಿಸಿದ ಕಾನೂನು ಸಚಿವ ಎಚ್.ಕೆ. ಪಾಟೀಲ್‌ 

ಹುಬ್ಬಳ್ಳಿ(ನ.07):  ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಾದಂತೆ ಅಡ್ಡಿ-ಆತಂಕಗಳೂ ಹೆಚ್ಚಾಗಿವೆ. ಮುಡಾ ಹಗರಣದ ವಿಚಾರಣೆಗೆ ಹಾಜರಾಗಿದ್ದಾರೆ. ಯಾವ ಸಮಸ್ಯೆಗಳು ಆಗದಂತೆ ಆರೋಪದಿಂದ ಹೊರ ಬರಲಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂಬುದು ಬಿಜೆಪಿ ಅವರು ಒತ್ತಾಯ ಮಾಡುತ್ತಿದ್ದಾರೆ. ಅದರಂತೆ ಚುನಾವಣಾ ಬಾಂಡ್ ಹಗರಣದಲ್ಲಿ ಪ್ರಧಾನಿಗಳೂ ರಾಜೀನಾಮೆ ನೀಡಬೇಕಲ್ಲವೇ ಎಂದು ಪ್ರಶ್ನಿಸಿದರು. 

ಕೇಂದ್ರ ಅನುದಾನ ನೀಡಿರುವ ಬಗ್ಗೆ ಸಷ್ಟಪಡಿಸಿದರೆ ನಾನು ರಾಜಕೀಯವನ್ನೇ ಬಿಡ್ತೇನೆ: ಜೋಶಿಗೆ ಸಿದ್ದು ಸವಾಲು!

ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆ ಬಗ್ಗೆ ಬಿಜೆಪಿಗರಿಗೆ ಶಂಕೆ ಯಾಕೆ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಸಾವಿರಾರು ಕೋಟಿ ರು. ಗಣಿ ಹಗರಣ ತನಿಖೆ ನಡೆಸಿದ್ದು ನಮ್ಮ ಲೋಕಾಯುಕ್ತ ಅಲ್ಲವೆ? ಲೋಕಾಯುಕ್ತ ಅಧಿಕಾರಿಗಳ ಮೇಲೆ ಸಿಎಂ ಪ್ರಭಾವ ಬೀರುತ್ತಾರೆ ಎನ್ನುವುದಾದರೆ ಕೇಂದ್ರ ಸಚಿವರ ವಿರುದ್ದದ ಹಗರಣದ ಬಗ್ಗೆ ಯಾರು ತನಿಖೆ ನಡೆಸಬೇಕು ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!