ಅನಾಮಿಕ ವ್ಯಕ್ತಿಗಳಿಂದ 160 ಮಹಾಸ್ಥಾನದ ಗೆಲುವಿನ ಆಫರ್‌ : ಪವಾರ್‌

Kannadaprabha News   | Kannada Prabha
Published : Aug 10, 2025, 05:18 AM IST
Sharad Pawar

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬೆನ್ನಲ್ಲೇ ಇದೀಗ ಎನ್‌ಸಿಪಿ ನಾಯಕ ಶರದ್‌ ಪವಾರ್ ಕೂಡ, ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಗ್ಪುರ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬೆನ್ನಲ್ಲೇ ಇದೀಗ ಎನ್‌ಸಿಪಿ ನಾಯಕ ಶರದ್‌ ಪವಾರ್ ಕೂಡ, ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಗೂ ಮುನ್ನ ಇಬ್ಬರು ವ್ಯಕ್ತಿಗಳು ನನ್ನನ್ನು ದೆಹಲಿಯಲ್ಲಿ ಭೇಟಿಯಾಗಿದ್ದರು, ಪ್ರತಿಪಕ್ಷಗಳನ್ನು 160 ಸ್ಥಾನಗಳಲ್ಲಿ ಗೆಲ್ಲಿಸಿ ಕೊಡುವುದಾಗಿ ಅವರು ಸ್ಪಷ್ಟ ಭರವಸೆ ನೀಡಿದ್ದರು. ಆದರೆ ನಾವು ಅವರ ಆಫರ್‌ ತಿರಸ್ಕರಿಸಿದೆವು ಎಂದು ಪವಾರ್ ಹೊಸ ಬಾಂಬ್‌ ಹಾಕಿದ್ದಾರೆ.

ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಈ ಇಬ್ಬರು ವ್ಯಕ್ತಿಗಳು ನನ್ನನ್ನು ಭೇಟಿಯಾಗಿದ್ದರು. 228ರಲ್ಲಿ 160 ಸ್ಥಾನಗಳನ್ನು ಗೆಲ್ಲಿಸಿಕೊಡುವ ಸ್ಪಷ್ಟ ಭರವಸೆ ನೀಡಿದ್ದರು. ನಾನು ಅವರನ್ನು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭೇಟಿಗೆ ವ್ಯವಸ್ಥೆ ಮಾಡಿಸಿದೆ. ಅವರು ತಮಗೆ ಏನೇನು ಬೇಕಿದೆ ಎಂಬುದನ್ನು ತಿಳಿಸಿದರು. ಕೊನೆಗೆ ನಾನು ಮತ್ತು ರಾಹುಲ್‌ ಗಾಂಧಿ ಇಬ್ಬರೂ ಇದು ನಮ್ಮ ಮಾರ್ಗ ಅಲ್ಲ, ನಾವು ಜನರ ಮುಂದೆ ಹೋಗಿ ಬೆಂಬಲ ಗಳಿಸಲು ಪ್ರಯತ್ನಿಸೋಣ ಎಂದು ನಿರ್ಧರಿಸಿದೆವು ಎಂದು ಪವಾರ್‌ ಹೇಳಿದರು.

ನಾವು ಈ ವಿಚಾರ ಕುರಿತು ಆಗ ಹೆಚ್ಚಿನ ಗಮನ ನೀಡಿರಲಿಲ್ಲ. ಆದರೆ ಆ ವಿಚಾರ ಈಗಲೂ ನನಗೆ ನೆನಪಿದೆ. ಅವರ ಮಾತು ಕೇಳಿ ನನಗೆ ಅಚ್ಚರಿಯಾಗಿತ್ತು. ಅವರು ಅಷ್ಟು ಖಚಿತವಾಗಿ ಹೇಳಿದರೂ ನನಗೆ ಚುನಾವಣಾ ಆಯೋಗದ ಕುರಿತು ಯಾವುದೇ ಅನುಮಾನ ಇರಲಿಲ್ಲ. ಹೀಗಾಗಿ ನಾನು ಅವರನ್ನು ನಿರ್ಲಕ್ಷಿಸಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ