ಅಂತಿಮ ದಿನ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಮೂವರು ನಾಮಪತ್ರ ಸಲ್ಲಿಕೆ

Published : Apr 21, 2023, 07:43 AM IST
ಅಂತಿಮ ದಿನ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಮೂವರು ನಾಮಪತ್ರ ಸಲ್ಲಿಕೆ

ಸಾರಾಂಶ

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ಗುರುವಾರ ನಗರದಲ್ಲಿ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. 

ಬೆಂಗಳೂರು (ಏ.21): ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ಗುರುವಾರ ನಗರದಲ್ಲಿ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಅಳೆದು ತೂಗಿ ಬುಧವಾರ ರಾತ್ರಿ ಬಿಡುಗಡೆ ಮಾಡಲಾದ ಪಟ್ಟಿಯಲ್ಲಿನ ಸಿ.ವಿ.ರಾಮನ್‌ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್‌.ಆನಂದ ಕುಮಾರ್‌, ಪುಲಕೇಶಿ ನಗರ ಕ್ಷೇತ್ರದ ಅಭ್ಯರ್ಥಿ ಎ.ಸಿ.ಶ್ರೀನಿವಾಸ್‌ ಹಾಗೂ ಕೆ.ಆರ್‌.ಪುರ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಮೋಹನ್‌ ಗುರುವಾರ ನಾಮಪತ್ರ ಸಲ್ಲಿಸಿದರು. 

ಆ ಪೈಕಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕಾಂಗ್ರೆಸ್‌ ಅಭ್ಯರ್ಥಿಗಳಲ್ಲಿ ಎಸ್‌.ಆನಂದ್‌ ಕುಮಾರ್‌ ಅತಿ ಕಡಿಮೆ ಆಸ್ತಿ (.30.14 ಲಕ್ಷ) ಹೊಂದಿದ್ದಾರೆ. ಉಳಿದಂತೆ ಕೆ.ಆರ್‌.ಪುರ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಮೋಹನ್‌ 131.16 ಕೋಟಿ ಆಸ್ತಿ ಹೊಂದಿರುವುದಾಗಿ ಘೋಷಿಸಿ ಕೊಂಡಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಕಾಂಗ್ರೆಸ್‌ ಧಿಕ್ಕರಿಸಿ ಕಮಲಕ್ಕೆ ಮತ ನೀಡಿ: ರಾಜೀವ್‌ ಚಂದ್ರಶೇಖರ್‌

ಎಸ್‌.ಆನಂದ ಕುಮಾರ್‌ ಆಸ್ತಿ 30.14 ಲಕ್ಷ ರು.!: ಸಿ.ವಿ.ರಾಮನ್‌ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್‌.ಆನಂದ ಕುಮಾರ್‌ .30.14 ಲಕ್ಷ ಹೊಂದಿರುವುದಾಗಿ ಘೋಷಿಸಿಕೊಂಡಿದ್ದು, ಅದು ಕೇವಲ ಚರಾಸ್ತಿಯಾಗಿದೆ. ಅವರ ಬಳಿ ಯಾವುದೇ ಚಿನ್ನಾಭರಣ, ವಾಹನವಿಲ್ಲ. ಬದಲಿಗೆ ತಾಯಿ ಬಳಿ 160 ಗ್ರಾಂ ಚಿನ್ನವಿದೆ. ಕೃಷಿ ಭೂಮಿ, ವಾಣಿಜ್ಯ ಕಟ್ಟಡ, ವಸತಿ ಕಟ್ಟಡ ಸೇರಿ ಯಾವುದೇ ಸ್ಥಿರಾಸ್ತಿಯಿಲ್ಲ. ಚರಾಸ್ತಿ ಪೈಕಿ ಆನಂದ ಕುಮಾರ್‌ ಮತ್ತು ಅವರ ತಾಯಿ .2.35 ಲಕ್ಷ ನಗದು ಹೊಂದಿದ್ದಾರೆ. ಉಳಿದಂತೆ ಬ್ಯಾಂಕ್‌ ಖಾತೆಯಲ್ಲಿ .2.49 ಲಕ್ಷ ಇದ್ದರೆ, ಮಣಿಕಂಠ ಎಂಬುವವರಿಗೆ .16.50 ಲಕ್ಷ ಸಾಲ ನೀಡಿದ್ದಾರೆ. ಆನಂದ ಕುಮಾರ್‌ ಯಾವುದೇ ಹೊಣೆಗಾರಿಕೆಯನ್ನೂ ಹೊಂದಿಲ್ಲ.

ಸಿದ್ದರಾಮಯ್ಯ ಹಿಂದು ವಿರೋಧಿ, ಮುಸ್ಲಿಂ ನಾಯಕ: ಶೋಭಾ ಕರಂದ್ಲಾಜೆ

ಬಿ.ಶಿವಣ್ಣ ಆಸ್ತಿ .33.53 ಕೋಟಿ: ಆನೇಕಲ್‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಶಿವಣ್ಣ ಬಳಿ .33.53 ಕೋಟಿ ಆಸ್ತಿಯಿದೆ. ಅದರಲ್ಲಿ .5.06 ಕೋಟಿ ಚರಾಸ್ತಿ ಮತ್ತು .28.47 ಕೋಟಿ ಸ್ಥಿರಾಸ್ತಿಯಾಗಿದೆ. 2018ರಲ್ಲಿ ಶಿವಣ್ಣ ಬಳಿ .1.30 ಕೋಟಿ ಚರಾಸ್ತಿ ಮತ್ತು .19.70 ಕೋಟಿ ಸ್ಥಿರಾಸ್ತಿ ಸೇರಿ ಒಟ್ಟು .21 ಕೋಟಿ ಆಸ್ತಿಯಿತ್ತು. ಐದು ವರ್ಷಗಳಲ್ಲಿ ಬಿ.ಶಿವಣ್ಣ ಆಸ್ತಿ .12.53 ಕೋಟಿ ಹೆಚ್ಚಳವಾಗಿದೆ. ಪ್ರಸ್ತುತ 2.1 ಕೇಜಿ ಚಿನ್ನಾಭರಣ, 22 ಕೇಜಿ ಬೆಳ್ಳಿ ವಸ್ತುಗಳಿವೆ. ಎರಡು ಕಾರುಗಳು ಅವರ ಬಳಿಯಿದೆ. .3.88 ಕೋಟಿ ಹೊಣೆಗಾರಿಕೆಯನ್ನು ಅವರು ಹೊಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!