
ಬೆಂಗಳೂರು, (ಮೇ.07): ಮೊನ್ನೇ ಅಂದ್ರೆ ನಾಲ್ಕು ದಿನದಿಂದ ಅಷ್ಟೇ ರಾಜ್ಯದ ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಬದಲಿಸಲಾಗಿತ್ತು. ಆದ್ರೆ, ಇದೀಗ ಮತ್ತೆ ಇಂದು (ಶುಕ್ರವಾರ) ಮೂರು ಜಿಲ್ಲೆಗಳ ಉಸ್ತುವಾರಿಗಳನ್ನ ಚೇಂಜ್ ಮಾಡಿ ಸರ್ಕಾರ ಆದೇಶಿಸಿದೆ.
ಹೌದು... ಕೋಲಾರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದೆ.
6 ಜಿಲ್ಲೆಗಳಿಗೆ ನೂತನ ಉಸ್ತುವಾರಿ : ಯಾರಿಗೆ ಯಾವ ಜಿಲ್ಲೆ..?
ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಮತ್ತೆ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಉಳಿದಂತೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಚವ್ಹಾಣ್ ಬದಲಿಗೆ ತೋಟಗಾರಿಕೆ ಸಚಿವ ಆರ್.ಶಂಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೊದಲು ಅರವಿಂದ ಲಿಂಬಾವಳಿ ಅವರಿಗೆ ಬೀದರ್, ಪ್ರಭು ಚವ್ಹಾಣ್ಗೆ ಯಾದಗಿರಿ ಉಸ್ತುವಾರಿ ನೀಡಲಾಗಿತ್ತು.
ಕೆಲ ದಿನಗಳ ಹಿಂದೆ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಆರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.