ಗಿರಕಿ ಹೊಡೆಯೋರಿಗಿಲ್ಲ, ಕೆಲಸ ಮಾಡುವವರಿಗಷ್ಟೇ ಸ್ಥಾನ: ಡಿ.ಕೆ.ಶಿವಕುಮಾರ್

Published : Feb 26, 2025, 09:53 AM ISTUpdated : Feb 26, 2025, 09:58 AM IST
ಗಿರಕಿ ಹೊಡೆಯೋರಿಗಿಲ್ಲ, ಕೆಲಸ ಮಾಡುವವರಿಗಷ್ಟೇ ಸ್ಥಾನ: ಡಿ.ಕೆ.ಶಿವಕುಮಾರ್

ಸಾರಾಂಶ

ಕಾಂಗ್ರೆಸ್‌ ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರು (ಫೆ.26): ಕಾಂಗ್ರೆಸ್‌ ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಯಕರ ಹಿಂದೆ ಗಿರಕಿ ಹೊಡೆಯುವವರಿಗಿಂತ, ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ಯಾರಿಗೆ ಜವಾಬ್ದಾರಿ ನೀಡಿದರೆ ಫಲಿತಾಂಶ ಬರುತ್ತದೆಯೋ ಅವರಿಗೆ ಮಾತ್ರ ಪಕ್ಷದ ಪದಾಧಿಕಾರಿಗಳ ಪಟ್ಟಿಯಲ್ಲಿ ಅವಕಾಶ ನೀಡಲಾಗುವುದು. 

ನಮಗೆ ಕೆಲಸ ಮಾಡುವವರು ಬೇಕು. ತಾಲೂಕಿನಲ್ಲಿ ಕುಳಿತು, ಅಲ್ಲಿನ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು ಎಂದರು. ಪದಾಧಿಕಾರಿಗಳ ಪಟ್ಟಿ ಸಿದ್ಧವಾಗಿದೆ. ಕೆಲಸ ಮಾಡಲು ಯಾರಿಗೆ ಆಸಕ್ತಿ ಇಲ್ಲವೋ ಅವರನ್ನು ಬದಲಿಸಿ, ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುತ್ತಿದೆ. ಪಕ್ಷ ಸಂಘಟನೆ ವಿಚಾರದಲ್ಲಿ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡಬೇಕು. ಅದಕ್ಕೆ ತಕ್ಕಂತೆ ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಮಾತ್ರ ಜವಾಬ್ದಾರಿ ನೀಡಲಾಗುವುದು. ಎಐಸಿಸಿ ನಾಯಕರೂ ಅದೇ ಸೂಚನೆ ನೀಡಿದ್ದಾರೆ ಎಂದು ವಿವರಿಸಿದರು. 

ಮಹಿಳೆಯರ ಪರಿಗಣನೆ: ಮೀಸಲಾತಿ ಆಧಾರದಲ್ಲಿ ಪದಾಧಿಕಾರಿ ಸ್ಥಾನಕ್ಕೆ ಮಹಿಳಾ ನಾಯಕರನ್ನೂ ಪರಿಗಣಿಸಲಾಗುತ್ತಿದೆ. ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸುವ ವಿಚಾರವಾಗಿ ಸಚಿವರ ಅಭಿಪ್ರಾಯವನ್ನೂ ಪಡೆಯುತ್ತಿದ್ದು, ಈ ವಾರವೇ ಪಟ್ಟಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಎಚ್‌ಡಿಕೆಗೆ ಮತ್ತೆ ಭೂ ಸಂಕಷ್ಟ: ಕೇಸು ರದ್ದು ಕೋರಿದ್ದ ಮನವಿಗೆ ಸುಪ್ರೀಂ ಕೋರ್ಟ್‌ ನಕಾರ

ಕೆಲಸ ಮಾಡುವವರು ಬೇಕು
-ತಾಲೂಕುಗಳಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ನೀಡ್ತೀವಿ
-ಯಾರಿಗೆ ಜವಾಬ್ದಾರಿ ಕೊಟ್ರೆ ಫಲಿತಾಂಶ ಬರುತ್ತದೆಯೋ ಅವರಿಗೆ ಮಾತ್ರ ಅವಕಾಶ
-ಕೆಲಸ ಮಾಡಲು ಯಾರಿಗೆ ಆಸಕ್ತಿ ಇಲ್ಲವೋ ಅವರನ್ನು ಬದಲಿಸಿ, ಅನ್ಯರ ನೇಮಕ
-ಇದೇ ರೀತಿಯಲ್ಲಿ ನೇಮಕ ಮಾಡಲು ಎಐಸಿಸಿ ಕೂಡಾ ನಮಗೆ ಸೂಚನೆ ನೀಡಿದೆ
-ಮೀಸಲಾತಿ ಆಧಾರದಲ್ಲಿ ಪದಾಧಿಕಾರಿಗಳ ಸ್ಥಾನಕ್ಕೆ ಮಹಿಳೆಯರೂ ಪರಿಗಣನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ