ದಿಲ್ಲಿಯಲ್ಲಿ ಈಗ ಡಿಕೆಶಿ ಪರ ಆಪ್ತ ಶಾಸಕರ ಬಹಿರಂಗ ಲಾಬಿ!

Kannadaprabha News   | Kannada Prabha
Published : Nov 25, 2025, 05:45 AM IST
DK Shivakumar

ಸಾರಾಂಶ

ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆ ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಣ ಇದೀಗ ಬಹಿರಂಗವಾಗಿಯೇ ಲಾಬಿ ಆರಂಭಿಸಿದೆ. ಡಿ.ಕೆ.ಶಿವಕುಮಾರ್‌ ಅವರ 7 ಆಪ್ತ ಶಾಸಕರ ಒಂದು ತಂಡ ಈಗಾಗಲೇ ದೆಹಲಿ

ಬೆಂಗಳೂರು : ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆ ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಣ ಇದೀಗ ಬಹಿರಂಗವಾಗಿಯೇ ಲಾಬಿ ಆರಂಭಿಸಿದೆ. ಡಿ.ಕೆ.ಶಿವಕುಮಾರ್‌ ಅವರ 7 ಆಪ್ತ ಶಾಸಕರ ಒಂದು ತಂಡ ಈಗಾಗಲೇ ದೆಹಲಿ ತೆರಳಿದ್ದು, ಇನ್ನೊಂದು ತಂಡ ಮಂಗಳವಾರ ರಾಷ್ಟ್ರರಾಜಧಾನಿ ತಲುಪುವ ಸಾಧ್ಯತೆ ಇದೆ.

ಮೊದಲ ಹಂತದಲ್ಲಿ ಡಿ.ಕೆ.ಶಿವಕುಮಾರ್‌ ಆಪ್ತರ 1 ಗುಂಪು ದೆಹಲಿಗೆ

ಮೊದಲ ಹಂತದಲ್ಲಿ ಡಿ.ಕೆ.ಶಿವಕುಮಾರ್‌ ಆಪ್ತರ 1 ಗುಂಪು ದೆಹಲಿಗೆ ಹೋಗಿದೆ. ಭಾನುವಾರ ತಡರಾತ್ರಿಯೇ ದೆಹಲಿ ತಲುಪಿರುವ ಈ 7 ಶಾಸಕರ ತಂಡದಲ್ಲಿ ಶಾಸಕರಾದ ಎಚ್.ಸಿ. ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜು, ಇಕ್ಬಾಲ್ ಹುಸೇನ್, ಮಹೇಂದ್ರ ತಮ್ಮಣ್ಣವರ, ಬಾಬಾ ಸಾಹೇಬ್ ಪಾಟೀಲ್‌ ಹಾಗೂ ನಯನಾ ಮೋಟಮ್ಮ ಇದ್ದಾರೆ.

ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿ

ಈ ತಂಡ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಪಕ್ಷದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ಮತ್ತೊಂದೆಡೆ ಮಂಗಳವಾರ ಮತ್ತೊಂದು ತಂಡ ದೆಹಲಿಗೆ ತೆರಳಲು ಸಜ್ಜಾಗಿದೆ. ತನ್ಮೂಲಕ ಡಿ.ಕೆ.ಶಿವಕುಮಾರ್‌ ತಂಡ ಶಕ್ತಿ ಪ್ರದರ್ಶನ ಜತೆಗೆ, ನಂಬರ್‌ ಗೇಮ್‌ ಸಾಬೀತು ಮೂಲಕ ಅಧಿಕಾರ ಹಸ್ತಾಂತರಕ್ಕೆ ಒತ್ತಡ ಹೇರಲು ಮುಂದಾಗಿದೆ ಎನ್ನಲಾಗಿದೆ. ಈ ಬೆಳವಣಿಗೆಗಳು ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿವೆ.

- ಬಹಿರಂಗವಾಗಿಯೇ ಡಿಕೆಶಿ ಬಣದ ಲಾಬಿ ಶುರು

- ವರಿಷ್ಠರ ಮುಂದೆ ನೆಚ್ಚಿನ ನಾಯಕನ ಪರ ಪರೇಡ್‌

- ಸುರ್ಜೇವಾಲಾ ಭೇಟಿಯಾಗಲು ಶಾಸಕರ ಇರಾದೆ

- ಡಿಕೆಶಿ ಸಿಎಂ ಮಾಡಿ ಎಂದು ಈ ವೇಳೆ ಆಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ