ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ಬರಲ್ಲ, ಇನ್ನೊಂದು ಆಯ್ಕೆಯೂ ಇದೆ!

Published : Jan 15, 2019, 04:36 PM ISTUpdated : Jan 15, 2019, 04:42 PM IST
ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ಬರಲ್ಲ,  ಇನ್ನೊಂದು ಆಯ್ಕೆಯೂ ಇದೆ!

ಸಾರಾಂಶ

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ದೋಸ್ತಿ ಸರ್ಕಾರಕ್ಕೆ ಪಕ್ಷೇತರ ಶಾಸಕರಿಬ್ಬರು ನೀಡಿದ್ದ ಬೆಂಬಲ ಹಿಂದಕ್ಕೆ ಪಡೆದಿದ್ದಾರೆ.   ರಾಜ್ಯ ದೋಸ್ತಿ ಸರಕಾರಕ್ಕೆ ಒಂದು ಕಡೆ ಸಂಕಟ ಎದುರಾಗಿದೆ.

ಬೆಂಗಳೂರು(ಜ. 15)  ಒಂದು ವೇಳೆ ರಾಜ್ಯ ಸರ್ಕಾರ ಪತನ ಆದರೆ ಮುಂದೆ ರಾಜ್ಯದಲ್ಲಿ ಏನಾಗುತ್ತದೆ ಎಂಬುದು ಅಷ್ಟೆ ಮಹತ್ವದ ಪ್ರಶ್ನೆ. ಏಕಾಏಕಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಬಿಡುತ್ತದೆಯೇ? ಅಥವಾ ಬೇರೆ ಆಯ್ಕೆಗಳು ಇರುತ್ತವೆಯೇ?

ಹಂತ 1: ಪಕ್ಷೇತರ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ತಾವು ಹೇಳಿದಂತೆ ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆದ ಪತ್ರ ನೀಡಬೇಕಾಗುತ್ತದೆ.

ಸರ್ಕಾರಕ್ಕೆ ಪಕ್ಷೇತರರ ಬೆಂಬಲ ವಾಪಸ್: ಸಂ‘ಕ್ರಾಂತಿ’ ಸಕ್ಸಸ್!

ಹಂತ 2: ಕಾಂಗ್ರೆಸ್ ಅತೃಪ್ತರು  ಶಾಸಕರು ಎಂದು ಕರೆಸಿಕೊಂಡಿರುವ 6 ಜನರನ್ನು ಮೊದಲ ಹಂತದಲ್ಲಿ ರಾಜೀನಾಮೆ ಕೊಡಿಸಿದರೆ ಸಂಖ್ಯಾ ಬಲ 120 ರಿಂದ 112 ಕ್ಕೆ ಇಳಿಯುತ್ತದೆ. ಇದನ್ನು ಇಟ್ಟುಕೊಂಡು ರಾಜ್ಯಪಾಲರು ಬಹುಮತ ಸಾಬೀತಿಗೆ ಸರ್ಕಾರವನ್ನು ಕೇಳಬಹುದು.

ಹಂತ 3: ಶಾಸಕರು ರಾಜೀನಾಮೆ ಸಲ್ಲಿಕೆಗೆ ಮುಂದಾದರೆ ಸ್ಪೀಕರ್ ಪಾತ್ರ ಸಹ ಮುಖ್ಯವಾಗುತ್ತದೆ. ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂಬುದನ್ನು ಸ್ಪೀಕರ್‌ಗೆ ಮನವರಿಕೆ ಮಾಡಿಕೊಡಬೇಕಾಗುತ್ತದೆ.

ಜೆಡಿಎಸ್‌ ಶಾಸಕರಿಗೆ ದೇವೇಗೌಡರ ತುರ್ತು ಬುಲಾವ್! 

ಬಿಜೆಪಿಯ ನಾಯಕರು ಹರಸಾಹಸ ಮಾಡುತ್ತಿರುವ ಉದ್ದೇಶ ಸರ್ಕಾರ ಕೆಡುವುದೆ ಹೊರತು ಸದ್ಯಕ್ಕೆ ಹೊಸ ಸರ್ಕಾರ ರಚನೆ ಅಲ್ಲ ಎಂಬ ಮಾತು ಕೇಳಿಬರುತ್ತಿದೆ. ಒಂದು ವೇಳೆ ದೋಸ್ತಿ ಸರ್ಕಾರದ ಬಹುಮತ ಕುಸಿದರೆ ಶಾಸಕರು ರಾಜೀನಾಮೆ ನೀಡಿರುವ ಎಲ್ಲ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಾಗುತ್ತದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ರಾಜೀನಾಮೆ ನೀಡಿದ್ದರೆ ಆ ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತದೆ.  ಬಹುಮತ ಸಾಬೀತಿಗೆ ಈ ದೋಸ್ತಿ ಸರಕಾರ ವಿಫಲವಾದರೆ ಅಲ್ಲಿಯವರೆಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬಹುದು.

 

 


 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ