‘ಸಮೀಕರಣದಿಂದ ವಿಪಕ್ಷ ನಾಯಕರ ಆಯ್ಕೆ ವಿಳಂಬ’ ಸಂಸದ ಬಿವೈ ರಾಘವೇಂದ್ರ

Published : Jul 08, 2023, 09:59 AM IST
‘ಸಮೀಕರಣದಿಂದ ವಿಪಕ್ಷ ನಾಯಕರ ಆಯ್ಕೆ ವಿಳಂಬ’ ಸಂಸದ ಬಿವೈ ರಾಘವೇಂದ್ರ

ಸಾರಾಂಶ

ರಾಜ್ಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಕೇಂದ್ರದಿಂದ ವೀಕ್ಷಕರು ಬಂದಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತು ರಾಜ್ಯಾಧ್ಯಕ್ಷ ಸ್ಥಾನಗಳಿಗೆ ಸಮೀಕರಣ ನಡೆದಿದೆ. ಸಮೀಕರಣವನ್ನು ಗಮನದಲ್ಲಿಟ್ಟುಕೊಂಡ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರ ಆಯ್ಕೆ ವಿಳಂಬ ಆಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ (ಜು.8) : ರಾಜ್ಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಕೇಂದ್ರದಿಂದ ವೀಕ್ಷಕರು ಬಂದಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತು ರಾಜ್ಯಾಧ್ಯಕ್ಷ ಸ್ಥಾನಗಳಿಗೆ ಸಮೀಕರಣ ನಡೆದಿದೆ. ಸಮೀಕರಣವನ್ನು ಗಮನದಲ್ಲಿಟ್ಟುಕೊಂಡ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರ ಆಯ್ಕೆ ವಿಳಂಬ ಆಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ಸ್ಥಾನದ ಅವಧಿ ಮುಗಿದಿದೆ. ಸ್ಥಾನಗಳ ಆಯ್ಕೆಗೆ ವಿಳಂಬವಾಗಲು ಇನ್ಯಾವ ಕಾರಣಗಳು ಗೋಚರಿಸುತ್ತಿಲ್ಲ. ವಿಧಾನಸಭೆಯಲ್ಲಿ ಇರುವ ಎಲ್ಲ ಶಾಸಕರಿಗೂ ಶಕ್ತಿ ಇದೆ. ಇವರು ಸೂಚಿಸುವವರು ವಿಪಕ್ಷ ನಾಯಕನಾಗಿ ಆಯ್ಕೆಯಾಗುತ್ತಾರೆ ಎಂದರು.

ಕೇಂದ್ರ ಸರ್ಕಾರದಿಂದ 25 ಟವರ್‌ ಮಂಜೂರು: ಸಂಸದ ಬಿವೈ ರಾಘವೇಂದ್ರ

ಪಕ್ಷ ತಾಯಿ ಇದ್ದಂತೆ. ಪಕ್ಷಕ್ಕೆ ನೋವಾದಾಗ ನೋಟಿಸ್‌ ನೀಡಿದ್ದಾರೆ. ಇದು ಮಾಜಿ ಸಚಿವ ರೇಣುಕಾಚಾರ್ಯರಿಗೆ ಮಾತ್ರ ಅಲ್ಲ ತುಂಬಾ ಜನರಿಗೆ ನೋಟಿಸ್‌ ನೀಡಲಾಗಿದೆ. ರೇಣುಕಾಚಾರ್ಯ ಅವರು ಸಾಕಷ್ಟುಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಆದರೂ ಸೋತಿದ್ದಾರೆ. ಸೋತ ನೋವಲ್ಲಿ ಈ ರೀತಿ ಮಾತನಾಡಿದ್ದಾರೆ. ನೋಟಿಸ್‌ಗೆ ಉತ್ತರ ನೀಡುವುದು ಸ್ವಲ್ಪ ನಿಧಾನ ಆಗಿರಬಹುದು ಎಂದರು.

ಗ್ಯಾರಂಟಿಯಿಂದಾಗಿ ಕಾಂಗ್ರೆಸ್‌ಗೆ ತಾತ್ಕಾಲಿಕ ಗೆಲುವಾಗಿದೆ. ರಾಜ್ಯದ ಜನರು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಇಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಎಂದು ನಾವು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್‌ಗೆ ಗ್ಯಾರಂಟಿಯ ಲಾಟರಿ ಹೊಡೆದಿದೆ. ಮುಂಬರುವ ಚುನಾವಣೆಯಲ್ಲಿ ಇದಕ್ಕೆ ಉತ್ತರ ಸಿಗಲಿದೆ ಎಂದು ಹೇಳಿದರು.

Shikaripur constituency: ವಿಜಯೇಂದ್ರರನ್ನು ಸೋಲಿಸಲು ವಾಮಾಚಾರ: ಬಿವೈ ರಾಘವೇಂದ್ರ

ವಿಐಎಸ್‌ಎಲ್‌ ಕಾರ್ಖಾನೆ ಯಾವುದೇ ಕಾರಣಕ್ಕೂ ಬಂದ್‌ ಆಗಲ್ಲ. ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮ್‌ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಕಾರ್ಖಾನೆ ಅಗತ್ಯ ಕಚ್ಚಾ ವಸ್ತುಗಳ ಪೂರೈಕೆ ಮಾಡುವಲ್ಲಿ ಸ್ವಲ ವಿಳಂಬವಾಗಿದೆ ಅಷ್ಟೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್