
ಚಿಕ್ಕಬಳ್ಳಾಪುರ(ನ.20): ಸರ್ಕಾರಿ ಶಾಲೆಯ ಅವರಣದಲ್ಲಿ ಅವರು ಮಸೀದಿ ಕಟ್ಟುತ್ತಾರೆ ಮತ್ತು ಸರ್ಕಾರ ಮೌನವಾಗಿರುತ್ತದೆ ಅಂದರೆ ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ ಮತ್ತು ಇದು ಕಾಂಗ್ರೆಸ್ ಸರ್ಕಾರದ ದುರಹಂಕಾರದ ಪರಮಾವಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಕ್ಫ್ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್. ಎಂ.ವಿಶ್ವೇಶ್ವರಯ್ಯ ಓದಿದ ನಗರದ ಕಂದವಾರ ವಾರ್ಡ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಡಾ.ಕೆ.ಸುಧಾಕರ್ ಮಾಜಿ ಸಂಸದ ಮುನಿ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಆರ್.ಅಶೋಕ್ ಮಾತನಾಡಿ, ವಕ್ಫ್ ಬೋರ್ಡ್ ದುರಹಂಕಾರ ಇಲ್ಲಿ ನಿಚ್ಚಳವಾಗಿ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಕ್ಫ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಚಿವ ಎಂಸಿ ಸುಧಾಕರ್ ಕಿಡಿ
173 ವರ್ಷ ಹಳೆಯ ಶಾಲೆ:
ವಿಶ್ವವಿಖ್ಯಾತ ಇಂಜನೀಯರ್ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಸುಮಾರು 173 ವರ್ಷಗಳಿಗೂ ಹಳೆಯದಾದ ಸರ್ಕಾರಿ ಶಾಲೆ ಒಳಗೆ ಗೋರಿ, ಮಸೀದಿ ಬಂದಿದ್ದು ಹೇಗೆ, ಇಲ್ಲಿ ನಾಗರಕಲ್ಲುಗಳು ಹುತ್ತ ಇದೆ ಅದಕ್ಕೆ ನಮ್ಮ ಹಿಂದೂ ಮಹಿಳೆಯರು ಪೂಜೆ ಮಾಡ್ತಿದ್ದಾರೆ. ಆದರೆ ಅದಕ್ಕೂ ಸಹ ಬೇಲಿ ಮುಸ್ಲಿಂ ಬಾವುಟ ಹಾರಿಸಿದ್ದಾರೆ. ಮುಸ್ಲಿಂ ಸಂಪ್ರದಾಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸುತ್ತಾರಾ ಎಂದು ಪ್ರಶ್ನಿಸಿದರು.
ಈ ರೀತಿ ಶಾಲಾ ಆವರಣದಲ್ಲಿ ಇದ್ದರೆ ಮಕ್ಕಳು ವಿದ್ಯೆ ಕಲಿಯುವುದಾದರೂ ಹೇಗೆ. ಲವ್ ಜಿಹಾದಿ ತರಹ ಲ್ಯಾಂಡ್ ಜಿಹಾದಿ ಮಾಡುತ್ತಿದೆ. ಮತ್ತು ಈ ಶಾಲೆಗೆ ಬರುವ ಮಕ್ಕಳ ಮನಸ್ಸು ಪರಿವರ್ತನೆ ಮಾಡಿ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಳ್ಳುವ ಹುನ್ನಾರವೇನಾ ದರೂ ನಡೆಯುತ್ತಿದೆಯಾ ಪ್ರಶ್ನಿಸಿದರು.
ಶಾಲೆಯ ಹೆಸರಿಗೆ ಪಹಣಿ:
15 ದಿನಗಳ ಹಿಂದೆ ಸಂಸದ ಡಾ. ಕೆ.ಸುಧಾಕರ್ನೀಡಿದ ಮಾಹಿತಿ ಮೇರೆಗೆ ತಾವು ಇಲ್ಲಿಗೆ ಬರುವುದಾಗಿ ತಿಳಿಸಿದ್ದೆ, ನಾನು ಯಾವಾಗ ಇಲ್ಲಿಗೆ ಬರುತ್ತೇನೆಂದು ತಿಳಿಯಿತೋ 10 ದಿನಗಳ ಹಿಂದೆ ವಕ್ಸ್ ಹೆಸರಿಗೆ ಹೋಗಿದ್ದ ಶಾಲೆಯ ಜಮೀನು ಕೂಡಲೆ ತಿದ್ದುಪಡಿಯಾಗಿ ಶಾಲೆಯ ಹೆಸರಿಗೆ ಮುಟೇಶನ್ ಮತ್ತು ಪಹಣಿ ಬದಲಾಗಿದೆ ಎಂದು ತಿಳಿಸಿದರು.
ವಕ್ಫ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ!
ಗೆಜೆಟ್ ನೋಟಿಫಿಕೇಶನ್ ರದ್ದಾಗಲಿ:
ಶ್ರೀರಂಗ ಪಟ್ಟಣದ ಮಹದೇವಪುರದಲ್ಲಿ ಚಿಕ್ಕಮ್ಮದೇವಲಯದ ಆಸ್ತಿ ಸಹಾ ವಕ್ಫ್ನ ಆಸ್ತಿಯಾಗಿದೆ ಎಂದು ಅದನ್ನು ಕಬರಸ್ಥಾನ (ಸ್ಮಶಾನ) ಎಂದು ತಿದ್ದುಪಡಿ ಮಾಡಿದ್ದರು. ಅಲ್ಲಿಗೆ ಬೇಟಿ ನೀಡುತ್ತಿದ್ದಂತೆ ಅದನ್ನು ಮತ್ತೆ ಚಿಕ್ಕಮ್ಮ ದೇವಸ್ಥಾನದ ಆಸ್ತಿ ಎಂದು ಬದಲಿಸಿದ್ದಾರೆ. ಸ್ಮಶಾನದಲ್ಲಿ ಇರಬೇಕಾದ ಪಿಶಾಚಿಗಳು ಊರೊಳಗೆ ಬಂದಿವೆ. ರೈತರ ಪಹಣಿಗಳಲ್ಲಿ ವಕ್ಫ್ ಅಂತ ನಮೂದಾಗಿರುವುದನ್ನು ಅಳಿಸುವವರೆಗೆ ಮತ್ತು 1994ರ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡದ ಹೊರತು ಬಿಜೆಪಿ ವಿಶ್ರಮಿಸುವುದಿಲ್ಲ ಎಂದು ಹೇಳಿದರು.
ಈ ವೇಳೆ ಎಸಿ ಡಿ.ಹೆಚ್.ಅಶ್ವಿನ್, ತಹಸಿಲ್ದಾರ್ ಅನಿಲ್, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತೆಗೆದುಕೊಂಡರು.ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನೀವು ಹೇಗೆ ಶಾಲೆಯ ಆಸ್ತಿಯನ್ನು ವಕ್ಸ್ ಗೆ ವರ್ಗಾಯಿಸಿದಿ ಎಂದು ಪ್ರಶ್ನಿಸಿದರೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಯ ಸೊತ್ತನ್ನು ಬಂದೋ ಬಸ್ತು ಮಾಡಿಕೊಳ್ಳದೇ ವಕ್ಫ್ಗೆ ವರ್ಗಾಯಿಸಿದರೂ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೂ ಮುನ್ನ ಆಶೋಕ್, ಸಂಸದ ಡಾ.ಕೆ. ಸುಧಾಕರ್ ಮುದ್ದೇನಹಳ್ಳಿಗೆ ಭೇಟಿ ನೀಡಿ ಸರ್ ಎಂವಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.