ಇಂದು ಕೇಂದ್ರ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆ: ಮೀಟಿಂಗ್‌ನಲ್ಲಿ ಈ 6 ವಿಚಾರಗಳ ಚರ್ಚೆ; ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌..

Published : Jul 17, 2023, 11:20 AM IST
ಇಂದು ಕೇಂದ್ರ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆ: ಮೀಟಿಂಗ್‌ನಲ್ಲಿ ಈ 6 ವಿಚಾರಗಳ ಚರ್ಚೆ; ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌..

ಸಾರಾಂಶ

ಎರಡು ದಿನಗಳ ಕಾಲ ವಿಪಕ್ಷಗಳ ಮಹತ್ವದ ಸಭೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದೆ. ಈ ವೇಳೆ 6 ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. 

ಬೆಂಗಳೂರು (ಜುಲೈ 17, 2023): ನಗರದ ಖಾಸಗಿ ಹೊಟೇಲ್‌ನಲ್ಲಿ ಕೇಂದ್ರ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆ ಆಯೋಜನೆಯಾಗಿದೆ. ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದೆ. ಈ ಸಭೆಯಲ್ಲಿ 23 ಪಕ್ಷದ 49 ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. 

ಇನ್ನು, ಇಂದಿನ ಸಭೆಯಲ್ಲಿ 6 ಪ್ರಮುಖ ವಿಚಾರಗಳ ಚರ್ಚೆಯಾಗಲಿದೆ. 

ಇದನ್ನು ಓದಿ: ಮೋದಿ ಮಣಿಸಲು ಬೆಂಗ್ಳೂರಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಸಭೆ: 26 ಪಕ್ಷಗಳ ಮುಖಂಡರಿಗೆ ಆಹ್ವಾನ

1) ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳು ರೂಪಿಸಲು ಉಪಸಮಿತಿ ರಚನೆ ಬಗ್ಗೆ ಚರ್ಚೆ

ಇದು ಮುಂದಿನ ಲೋಕಸಭಾ ಚುನಾವಣೆಗೆ ವಿಪಕ್ಷ ಮೈತ್ರಿಕೂಟಗಳ ಸೇತುವೆಯಾಗಲಿದ್ದು,  ಮೈತ್ರಿಕೂಟದ ಬೆಳವಣಿಗೆಗಳ ಬಗ್ಗೆ ಪರಸ್ಪರ ಸಂವಹನ ನಡೆಸುವ ಕೆಲಸ ಮಾಡಲಿದೆ.

ಇದನ್ನೂ ಓದಿ: ಪ್ರತಿಪಕ್ಷಗಳಿಗೆ ಸಡ್ಡು: ನಾಳೆ ದಿಲ್ಲಿಯಲ್ಲಿ ಎನ್‌ಡಿಎ ಬಲ ಪ್ರದರ್ಶನ; 30 ರಾಜಕೀಯ ಪಕ್ಷಗಳ ನಾಯಕರು ಭಾಗಿ ನಿರೀಕ್ಷೆ

2) ಮೈತ್ರಿಕೂಟದ ಜಂಟಿ ಕಾರ್ಯಕ್ರಮಗಳ ಆಯೋಜನೆ ಉಪಸಮಿತಿ ರಚನೆ ಬಗ್ಗೆ ಚರ್ಚೆ
 ದೇಶಾದ್ಯಂತ ಎಲ್ಲೆಲ್ಲಿ ರಾಜಕೀಯ ರ್‍ಯಾಲಿಗಳನ್ನ ಆಯೋಜನೆ ಮಾಡಬೇಕು. ಸಮಾವೇಶಗಳನ್ನು ಎಲ್ಲಿ ಮಾಡಬೇಕು, ಕೇಂದ್ರ ಸರ್ಕಾರದ ವಿರುದ್ಧ ಯಾವ ರೀತಿ ಜನಾಂದೋಲನ ರೂಪಿಸಬೇಕು.
ಈ ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸುವ ಜವಾಬ್ದಾರಿ ಈ ಸಮಿತಿ ನಿರ್ವಹಣೆ ಮಾಡಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗ್ಯಾರಂಟಿ ಬೇಕೋ, ಬಿಜೆಪಿ ಬೇಕೋ? ನಿರ್ಧರಿಸಿ; ವಿಪಕ್ಷ ಗೆದ್ದರೆ ಹಗರಣ ಗ್ಯಾರಂಟಿ: ಪ್ರತಿಪಕ್ಷ ಮೈತ್ರಿಗೆ ಮೋದಿ ಚಾಟಿ

3) ಸೀಟು ಹಂಚಿಕೆ ಬಗ್ಗೆ ಗಂಭೀರ ಚರ್ಚೆ

ಯಾವ ರಾಜ್ಯದಲ್ಲಿ ಯಾವ ಪಕ್ಷ ಪ್ರಬಲವಾಗಿದೆಯೋ ಆ ಪಕ್ಷಕ್ಕೆ ಹೆಚ್ಚಿನ ಮನ್ನಣೆ. ಈ ಸಂದರ್ಭದಲ್ಲಿ ತಮ್ಮ ತಮ್ಮ ರಾಜ್ಯ ರಾಜಕೀಯ ಸ್ಥಿತಿಗತಿಗಳ ವಿವರಣೆಯನ್ನು ನಾಯಕರು ನೀಡಲಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ವಿಪಕ್ಷಗಳ ಮೈತ್ರಿ ಠುಸ್‌! ಪರಸ್ಪರ ಕಚ್ಚಾಡಿಕೊಂಡ ಕಾಂಗ್ರೆಸ್‌, ಟಿಎಂಸಿ, ಸಿಪಿಎಂ

4) EVM ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸುವುದು

ಹಾಗೂ, ಈ ಚರ್ಚೆಯ ಬಳಿಕ ಚುನಾವಣಾ ಆಯೋಗಕ್ಕೆ ಒಂದಷ್ಟು ಸಲಹೆಗಳನ್ನು ನೀಡುವುದು ಈ ಸಭೆಯ ಕಾರ್ಯಸೂಚಿಗಳಲ್ಲಿ ಒಂದಾಗಿದೆ.

5) ವಿಪಕ್ಷಗಳ ಮೈತ್ರಿಕೂಟಕ್ಕೆ ಇಡಬೇಕಾದ ಹೆಸರಿನ ಬಗ್ಗೆ ಮಾತುಕತೆ

- ಎಲ್ಲರಿಗೂ ಒಮ್ಮತ ಮೂಡುವ ಹೆಸರನ್ನು ಸಭೆಯಲ್ಲಿ ನಾಯಕರು ಪೈನಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಿಜೆಪಿ ಮಣಿಸಲು ಪಣ ತೊಟ್ಟ 17 ವಿಪಕ್ಷಗಳು: ಮುಂದಿನ ಸಭೆಗೆ ಬರಲು ಕಾಂಗ್ರೆಸ್‌ಗೆ ಆಪ್‌ ಷರತ್ತು

6) ಮೈತ್ರಿಕೂಟ ಮುನ್ನೆಡಸಲು ಸಂಚಾಲಕರನ್ನು ನೇಮಕ‌ ಮಾಡುವುದು

ಒಟ್ಟಾರೆ, ಈ ಆರು ಪ್ರಮುಖ ವಿಚಾರಗಳು ವಿಪಕ್ಷಗಳ ಒಕ್ಕೂಟದ ಮಹತ್ವದ ಸಭೆಯಲ್ಲಿ ಚರ್ಚೆ ಆಗಲಿದೆ. 

ಇದನ್ನೂ ಓದಿ: 2024 ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ: ಜೂನ್‌ 12ಕ್ಕೆ ಪಟನಾದಲ್ಲಿ ವಿಪಕ್ಷ ನಾಯಕರ ಬೃಹತ್‌ ‘ಲೋಕ’ಸಭೆ!
 
ಸಭೆಯ ಮಿನಿಟ್ to ಮಿನಿಟ್ ಪ್ರೋಗ್ರಾಂ ಮಾಹಿತಿ ಲಭ್ಯ

ಬೆಂಗಳೂರಿನಲ್ಲಿ ನಡೆಯಲಿರೋ ಜುಲೈ 17ರ ಸೋಮವಾರ ಸಭೆಯ ವಿವರಣೆ ಹೀಗಿದೆ ನೋಡಿ..

ಕೇಂದ್ರ ವಿಪಕ್ಷಗಳ ನಾಯಕರು ಸಂಜೆ 6 ಗಂಟೆಗೆ ಸಭೆಗೆ ಸೇರಲಿದ್ದು, ಈ ವೇಳೆ ಸಭೆಗೆ ಆಗಮಿಸಿದ ನಾಯಕರಿಗೆ ಸ್ವಾಗತ ಕೋರಲಾಗುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತ ಕೋರಲಿದ್ದಾರೆ. ಬಳಿಕ ಸಂಜೆ 6.10 ಕ್ಕೆ ಸಭೆಯಲ್ಲಿ ಚರ್ಚಿಸುವ ಆರು ಪ್ರಮುಖ ವಿಷಯಗಳ ಬಗ್ಗೆ ಪ್ರಸ್ತಾಪವಾಗಲಿದೆ. ನಂತರ, 7 ಗಂಟೆಗೆ ನಾಳೆ‌ ಸಭೆಯ ಕಾರ್ಯಸೂಚಿಗಳ ಬಗ್ಗೆ ಪ್ರಸ್ತಾಪ. ಹಾಗೂ, 7.30ಕ್ಕೆ ವಿಪಕ್ಷಗಳ ಒಕ್ಕೂಟದ ನಾಯಕರಿಗೆ ಔತಣಕೂಟವನ್ನು ಏರ್ಪಾಡು ಮಾಡಲಾಗಿದೆ. ರಾಜ್ಯ 
ಸಿಎಂ ಸಿದ್ದರಾಮಯ್ಯ ಈ ಎಲ್ಲ ನಾಯಕರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ.

ಅಲ್ಲದೆ, ಜುಲೈ 18 ಮಂಗಳವಾರ ಸಭೆಯ ಸಂಪೂರ್ಣ ವಿವರಣೆ ಹೀಗಿದೆ ನೋಡಿ.. 

ಬೆಳಗ್ಗೆ ಮೈತ್ರಿಕೂಟದ ನಾಯಕರ ಸಭೆ ಆರಂಭವಾಗಲಿದ್ದು, 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ. 11:10 ರಿಂದ ಸಭೆಯಲ್ಲಿ ಆರು ಪ್ರಮುಖ ವಿಷಯಗಳ ಬಗ್ಗೆ ಮತ್ತೆ ಚರ್ಚೆ ನಡೆಯಲಿದೆ. ಹಾಗೂ, ಸಭೆಯ ಅಜೆಂಡಾಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಯಲಿದೆ. 

ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮವಿರಲಿದ್ದು, ಬಳಿಕ, 2.30 ಕ್ಕೆ ಉಪಸಮಿತಿಗಳ ರಚನೆ ಮಾಡುವುದು, ಮೈತ್ರಿಕೂಟದ ಕಾರ್ಯದರ್ಶಿ ಆಯ್ಕೆಯಾಗಲಿದೆ. ನಂತರ, 3 ಗಂಟೆಗೆ ಮೈತ್ರಿಕೂಟದ ಸಭೆ ಮುಕ್ತಾಯವಾಗಲಿದ್ದು, 4 ಗಂಟೆಗೆ ಸುದ್ದಿಗೋಷ್ಠಿ ಆಯೋಜನೆಯಾಗಿದೆ. ಮೈತ್ರಿಕೂಟದ ಪ್ರಮುಖ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮೈತ್ರಿಕೂಟದ ಸಭೆಯ ನಿರ್ಣಯಗಳ ಬಗ್ಗೆ ಈ ವೇಳೆ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ