
ಬೆಂಗಳೂರು(ನ.11): ಲಿಂಗಾಯತ ಸಮುದಾಯಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಜವಾಬ್ದಾರಿ ನಿಭಾಯಿಸಲಿರುವ ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗ ಅಥವಾ ಇತರ ಹಿಂದುಳಿದ ವರ್ಗಗಳ ಸಮುದಾಯಕ್ಕೆ (ಒಬಿಸಿ) ನೀಡುವುದು ಬಹುತೇಕ ನಿಶ್ಚಿತವಾಗಿದೆ.
ಮೇಲ್ನೋಟಕ್ಕೆ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ಸಿಗಬಹುದು ಎಂಬ ಮಾತು ಕೇಳಿಬರುತ್ತಿದ್ದರೂ ಜೆಡಿಎಸ್ ಜತೆಗಿನ ಮೈತ್ರಿಯಾಗುವುದು ತೀರ್ಮಾನವಾಗಿರುವ ಹಿನ್ನೆಲೆಯಲ್ಲಿ ಒಬಿಸಿಗೆ ಅವಕಾಶ ನೀಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ ಎನ್ನಲಾಗುತ್ತಿದೆ.
ಜೆಡಿಎಸ್ ಕೋಟೆ ಮಂಡ್ಯದಲ್ಲಿ ಬಿಜೆಪಿ ಗೆಲ್ಲಿಸಿದ್ದ ತಂತ್ರಗಾರನಿಗೆ ಒಲಿದ ರಾಜ್ಯಾದ್ಯಕ್ಷ ಸ್ಥಾನ..!
ಒಕ್ಕಲಿಗ ಸಮುದಾಯಕ್ಕೆ ನೀಡುವುದಾದರೆ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಆರ್.ಅಶೋಕ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅದರಲ್ಲೂ ಅಶ್ವತ್ಥನಾರಾಯಣ ಅವರಿಗೆ ಹೆಚ್ಚು ಅವಕಾಶವಿದೆ ಎಂಬ ಮಾತು ಕೇಳಿಬಂದಿದೆ. ಇನ್ನು ಒಬಿಸಿ ವರ್ಗವನ್ನು ಪರಿಗಣಿಸುವ ನಿರ್ಧಾರ ಕೈಗೊಂಡಲ್ಲಿ ಮಾಜಿ ಸಚಿವ ವಿ.ಸುನೀಲ್ಕುಮಾರ್ ಅವರನ್ನು ಪರಿಗಣಿಸುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.