ಮುಂದೆ ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ: ಕೆ.ಎಸ್.ಈಶ್ವರಪ್ಪ

Published : Apr 27, 2025, 07:06 AM ISTUpdated : Apr 27, 2025, 08:59 AM IST
ಮುಂದೆ ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ: ಕೆ.ಎಸ್.ಈಶ್ವರಪ್ಪ

ಸಾರಾಂಶ

ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಖರ್ಗೆ ಹೇಳಿಕೆಯನ್ನು ಈಶ್ವರಪ್ಪ ಸ್ವಾಗತಿಸಿದರು. 

ಶಿವಮೊಗ್ಗ (ಏ.27): ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಶ್ಮೀರದಲ್ಲಿ ಭಯೋತ್ಪಾದಕರು ಧರ್ಮ ಕೇಳಿ ಬಟ್ಟೆ ಬಿಚ್ಚಿ ಗುಂಡಿನ ದಾಳಿ ನಡೆಸಿದ್ದರು. ಅದನ್ನು ಹಿಂದೂ ಸಮಾಜ ಸಹಿಸಲ್ಲ. ವಿರೋಧ ಪಕ್ಷಗಳು ಸಹ ಘಟನೆ ವಿಚಾರದಲ್ಲಿ ಎಲ್ಲರೂ ಒಂದಾಗಿದ್ದಾರೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಾಶ್ಮೀರದಲ್ಲಿ ಉಗ್ರರ ದಾಳಿ ಇಡೀ ಪ್ರಪಂಚದ ಗಮನ ಸೆಳೆದಿದೆ. ಘಟನೆ ಬೆನ್ನಲ್ಲೆ ಇಡೀ ಹಿಂದೂ ಸಮಾಜ ಒಂದಾಗಿದೆ. ಇಂತಹ ಸಂಕಷ್ಟದ ಸಮಯದಲ್ಲೂ ಕೂಡ ಎಲ್ಲಾ ಪಕ್ಷಗಳು ಕೇಂದ್ರ ಸರ್ಕಾರದ ಜೊತೆಯಲ್ಲಿ ಒಗ್ಗೂಡಿದ್ದು ಸಂತೋಷದ ವಿಚಾರ. ಮೊದಲು ಅನೇಕ ದೇಶಗಳು ಪಾಕಿಸ್ತಾನದ ಪರವಾಗಿತ್ತು. ಈಗ ಮೋದಿಯವರು ವಿಶ್ವನಾಯಕರಾಗಿದ್ದಾರೆ. ಪಾಕಿಸ್ತಾನ ಈಗ ಇಡೀ ವಿಶ್ವದ ಎದುರಲ್ಲಿ ಒಬ್ಬಂಟಿಯಾಗಿದೆ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ. ಪಾಕಿಸ್ತಾನಕ್ಕೆ ಕುಡಿಯೋಕೆ ನೀರು ಸಹ ಸಿಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಹಿಂದೂ ಸಮಾಜ ಉಪಜಾತಿಗಳ ಹೆಸರಲ್ಲಿ ಛಿದ್ರ ಛಿದ್ರವಾಗಿದೆ. ರಾಜಕಾರಣಿಗಳು ದೇಶವನ್ನು ಛಿದ್ರ ಮಾಡುವಲ್ಲಿ ಯಶ್ವಸ್ವಿಯಾಗಿದ್ದಾರೆ. ಕಾಶ್ಮೀರ ಘಟನೆ ನಂತರ ಇಡೀ ಭಾರತ ಒಂದು ಎಂದು ಒಂದಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಪ್ರಧಾನಿಯವರು ಬಿಹಾರದಲ್ಲಿ ಭಾಷಣ ಮಾಡುವಾಗ ಸಿಂಹದ ರೀತಿಯಲ್ಲಿ ಘರ್ಜಿಸಿದ್ರು. ಉಗ್ರರು ಊಹೆನೂ ಮಾಡಿರಬಾರದು ಅಂತ ಶಿಕ್ಷೆ ಕೊಡುತ್ತೇವೆ ಎಂದಿದ್ದಾರೆ. ಸಿಂದೂ ನದಿ ನೀರು ಬಿಡಲ್ಲ ಎನ್ನುವ ತಿರ್ಮಾನ ಮಾಡಿದ್ದಾರೆ. ಪ್ರಧಾನಿ ಮೋದಿಯವರ ದಿಟ್ಟ ನಿಲುವನ್ನು ಅನೇಕ ದೇಶಗಳು ಒಪ್ಪಿಕೊಂಡಿದೆ ಎಂದರು.

ಆ ಬ್ರಹ್ಮ ಬಂದರೂ ಈ ಜಾಗವನ್ನು ಮುಸ್ಲಿಂರಿಗೆ ಬಿಟ್ಟುಕೊಡುವುದಿಲ್ಲ: ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?

ಪಾಕಿಸ್ತಾನದ ಭಯೋತ್ಪಾದಕರು 27 ಜನರನ್ನು ಕಗ್ಗೊಲೆ ಮಾಡಿರೋದು ಈಡೀ ವಿಶ್ವ ಖಂಡಿಸಿದೆ. ರಾಷ್ಟ್ರಭಕ್ತರನ್ನ ಕಗ್ಗೊಲೆ ಮಾಡಿ ಭಯೋತ್ಪಾದಕರು ತಮ್ಮ ಶವಪೆಟ್ಟಿಗೆಗೆ ಕೊನೆ ಮೊಳೆಯನ್ನು ಹೊಡೆದುಕೊಂಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮೃತ ಮಂಜುನಾಥ್ ಅಂತಿಮ ದರ್ಶನದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಭಯೋತ್ಪಾದನೆಗೆ ಸಪೋರ್ಟ್ ಮಾಡುವಂತ ದೇಶಕ್ಕೆ ರಾಜತಾಂತ್ರಿಕವಾಗಿ ಕೇಂದ್ರ ಸರ್ಕಾರ ಪ್ರತ್ಯುತ್ತರ ನೀಡಿದೆ. ಸಿಂಧೂ ನದಿ ನೀರನ್ನು ಈಗಾಗಲೇ ಕೇಂದ್ರ ಸರ್ಕಾರ ಬಂದ್ ಮಾಡಿದೆ. ಅಖಂಡ ಭಾರತ ನಿರ್ಮಾಣಕ್ಕೆ ಇದು ಮೊದಲ ಹೆಜ್ಜೆಯಾಗಿದೆ. ಕಾಂಗ್ರೆಸ್ ನಾಯಕರು ಈಗ ದೇಶದ ಜೊತೆಗೆ ಇರಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!