ಶೆಟ್ಟರ್ ಬಿಟ್ಟ ಪರಿಷತ್ ಸ್ಥಾನ ನಿಷ್ಠಾವಂತರಿಗೆ: ಡಿ.ಕೆ.ಶಿವಕುಮಾರ್

Published : Jan 27, 2024, 06:51 AM IST
ಶೆಟ್ಟರ್ ಬಿಟ್ಟ ಪರಿಷತ್ ಸ್ಥಾನ ನಿಷ್ಠಾವಂತರಿಗೆ: ಡಿ.ಕೆ.ಶಿವಕುಮಾರ್

ಸಾರಾಂಶ

ಶೆಟ್ಟರ್‌ ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಬೆಂಗಳೂರು(ಜ.27):  ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಯಾರೇ ಹೋದರೂ ನಮ್ಮ ಪಕ್ಷಕ್ಕೆ ನಷ್ಟವಾಗುವುದಿಲ್ಲ. ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಪರಿಷತ್ ಸದಸ್ಯ ಸ್ಥಾನವನ್ನು ಕಾಂಗ್ರೆಸ್‌ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು ಎಂದು ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು ಹೇಳಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು. 

ಇಂದು ಬಂದು ನಾಳೆ ವಾಪಸು ಹೋಗಬಾರದು: ಖರ್ಗೆ ಚಾಟಿ

ಶೆಟ್ಟರ್‌ ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು ಎಂದರು. ಅವರಿಗೆ ವಿಧಾನಸಭೆ ಚುನಾವಣೆ ಟೆಕೆಟ್ ನೀಡಿದ್ದೆವು. 35 ಸಾವಿರಮತಗಳ ಅಂತರದಲ್ಲಿ ಸೋತಿದ್ದರು. ಆದರೂ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಆದರೂ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ