
ಬೆಂಗಳೂರು (ಡಿ.14): ದಾಳಿಕೋರರಿಗೆ ಸಂಸದ ಪ್ರತಾಪಸಿಂಹ ಅವರಿಗೆ ಪಾಸ್ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆದಕಾರಣ ಬಿಜೆಪಿ ಹಿರಿಯ ಮುಖಂಡರು ಅವರಿಗೆ ಕರೆದು ಬುದ್ದಿ ಹೇಳಬೇಕು. ಪಾಸ್ ಕೊಡುವಾಗ ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಅದಕ್ಕೆ ಆಕ್ಷೇಪಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ, ಘಟನೆಯನ್ನು ರಾಜಕೀಯಕರಣ ಗೊಳಿಸಬಾರದು. ಎಲ್ಲರೂ ಖಂಡಿಸುವ ಘಟನೆ ಇದು ಎಂದರು. ಕಾಂಗ್ರೆಸ್ ಸದಸ್ಯರಾದ ನಯನಾ ಮೋಟಮ್ಮ, ರಿಜ್ವಾನ ಅರ್ಷದ್, ಸಚಿವ ಪ್ರಿಯಾಂಕ ಖರ್ಗೆ ಕಾಂಗ್ರೆಸ್ ಸದಸ್ಯರು ಪಾಸ್ ಕೊಟ್ಟಿದ್ದರೆ ಈಗಾಗಲೇ ದೇಶದ್ರೋಹದ ಪಟ್ಟ ಕಟ್ಟುತ್ತಿದ್ದೀರಿ ಎಂದು ತಿರುಗೇಟು ನೀಡಿದರು. ಇದು ಆಡಳಿತ- ಪ್ರತಿಪಕ್ಷದ ನಡುವೆ ಜಟಾಪಟಿಗೆ ಕಾರಣವಾಯಿತು. ಪರಸ್ಪರ ಆರೋಪ- ಪ್ರತ್ಯಾರೋಪಕ್ಕೆ ದಾರಿ ಮಾಡಿಕೊಟ್ಟಿತು.
ಸಂಸತ್ತಿಗೆ ನುಗ್ಗಿದ ಆಗಂತುಕರನ್ನ ನಾನು, ಕಟೀಲ್ ಹಿಡಿದೆವು: ಸಂಸದ ಮುನಿಸ್ವಾಮಿ
ಈ ನಡುವೆ, 'ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗ ಡಿ.ಕೆ.ಶಿವಕುಮಾರ ಅವರೆಲ್ಲರೂ ತಮ್ಮ ಸಹೋದರರು ಎಂದು ಹೇಳಿದ್ದರು. ಹಾಗಂತ ನಾವೇನಾದರೂ ನೀವು ಭಯೋತ್ಪಾದಕರು, ಉಗ್ರರು ಎಂದು ಹೇಳಿದ್ದೀವಾ?' ಎಂದು ಅಶೋಕ್ ಪ್ರಶ್ನಿಸಿದರು. ಇದು ಆಡಳಿತ ಪಕ್ಷವನ್ನ ಮತ್ತಷ್ಟು ರೊಚ್ಚಿಗೆಬ್ಬಿಸಿತು. ಮಾತಿನ ಚಕಮಕಿ ಜೋರಾಯಿತು. ಯಾರು ಏನು ಮಾತನಾಡುತ್ತಿದ್ದಾರೆ ಎಂಬುದು ಕೂಡ ಗೊತ್ತಾಗಲಿಲ್ಲ. ಆಗ ಸಭಾಧ್ಯಕ್ಷರು, ಹತ್ತು ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿದರು.
News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್!
ಬಳಿಕ ಕಲಾಪ ಶುರು ಮಾಡಿದ ಸಭಾಧ್ಯಕ್ಷರು, ಸದನದಲ್ಲಿ ಉಳಿದ ಯಾರಿಗೂ ಮಾತನಾಡಲು ಅವಕಾಶ ನೀಡದೇ ಖಂಡನಾ ನಿರ್ಣಯವನ್ನು ತೆಗೆದುಕೊಂಡು ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲೂ ಭದ್ರತಾ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಪಾಸ್ ಕೊಡುವಾಗ ಕಡ್ಡಾವಾಗಿ ಪರಿಚಿತರಿಗೆ ನೀಡಬೇಕು ಎಂದು ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.