
ನವದೆಹಲಿ, (ನ.28): ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್ ಕುಮಾರ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ.
ತಕ್ಷಣದಿಂದ ಜಾರಿಯಾಗುವಂತೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು (ಶನಿವಾರ) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಹ್ಮದ್ ಭಾಯಿ ಇಲ್ಲದ ಕಾಂಗ್ರೆಸ್, ಗಾಂಧಿ ಕುಟುಂಬದ ಕಥೆಯೇನು?
ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ಅಹ್ಮದ್ ಪಟೇಲ್ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು. ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಆಡಳಿತದ ಹೊಣೆ ಹೊತ್ತಿರುವ ಬನ್ಸಾಲ್ ಅವರು, ಮಧ್ಯಂತರ ಕ್ರಮವಾಗಿ ತಕ್ಷಣದಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಈ ಹುದ್ದೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಹ್ಮದ್ ಪಟೇಲ್ ಅವರ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದರು. ಆದ್ರೆ, ಅವರ ಅಕಾಲಿಕ ನಿಧನದಿಂದ ಖಜಾಂಚಿ ಹುದ್ದೆ ಖಾಲಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.