
ಚಂಡೀಗಢ : ಕಾಂಗ್ರೆಸ್ನಲ್ಲಿ 500 ಕೋಟಿ ರು.ಯ ಸೂಟ್ಕೇಸ್ ಕೊಟ್ಟವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗುತ್ತದೆ. ನಾವು ಸದಾ ಪಂಜಾಬ್ ಬಗ್ಗೆ ಮಾತನಾಡುತ್ತೇವೆ. ಆದರೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಲು ನಮ್ಮ ಬಳಿ ₹500 ಕೋಟಿ ಹಣ ಇಲ್ಲ. ಹೀಗಾಗಿ, ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಮಾತ್ರವೇ ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ ಎಂದು ಸಿಧು ಅವರ ಪತ್ನಿ ನವಜೋತ್ ಕೌರ್ ಹೇಳಿದ್ದಾರೆ.
2027ರ ಚುನಾವಣೆ ಸಂಬಂಧ ಅವರ ಈ ಹೇಳಿಕೆ ಭಾರೀ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್ ನಾಯಕತ್ವದ ಮೇಲಿನ ಗಂಭೀರ ಆರೋಪವಾಗಿದೆ. ಈ ಬಗ್ಗೆ ಪಕ್ಷ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಆಗ್ರಹ ಮಾಡಿದೆ.
ಈ ಹಿಂದೆ ಕರ್ನಾಟಕದ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾ ಕೂಡಾ ಇಂತದ್ದೇ ಆರೋಪ ಮಾಡಿದ್ದರು. 2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಅನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹಣಕ್ಕೆ ಮಾರಿಕೊಳ್ಳಲಾಗಿತ್ತು. ಇದು ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಎಷ್ಟು ಆಳವಾಗಿ ಮುಳುಗಿದೆ ಎಂಬುದಕ್ಕೆ ಸಾಕ್ಷಿ ಎಂದು ಬಿಜೆಪಿ ವಕ್ತಾರ ಸುಧಾನ್ಷು ತ್ರಿವೇದಿ ಕಿಡಿಕಾರಿದ್ದಾರೆ.
2004ರಿಂದ ರಾಜಕಾರಣದಲ್ಲಿರುವ ಸಿಧು, ಮೊದಲಿಗೆ ಬಿಜೆಪಿ, ಕಾಂಗ್ರೆಸ್ ನಂತರ ತಮ್ಮ ಸ್ವಂತ ಪಕ್ಷವೊಂದನ್ನು ಸ್ಥಾಪಿಸಿ, ನಂತರ ಕಾಂಗ್ರೆಸ್ಗೆ ಹಿಂದಿರುಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.