ತುಮಕೂರಿನಲ್ಲಿ ಸದ್ದು ಮಾಡಿದ ಪೇ ಎಂಎಲ್ಎ ಪೋಸ್ಟರ್: ಶಾಸಕ ಜ್ಯೋತಿಗಣೇಶ್ ವಿರುದ್ಧ ಅಭಿಯಾನ

Published : Feb 25, 2023, 08:23 AM ISTUpdated : Feb 25, 2023, 11:20 AM IST
ತುಮಕೂರಿನಲ್ಲಿ ಸದ್ದು ಮಾಡಿದ ಪೇ ಎಂಎಲ್ಎ ಪೋಸ್ಟರ್: ಶಾಸಕ ಜ್ಯೋತಿಗಣೇಶ್ ವಿರುದ್ಧ ಅಭಿಯಾನ

ಸಾರಾಂಶ

ಈ ಹಿಂದೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದು ಬಾರೀ ಸುದ್ದಿಯಾಗಿತ್ತು. ಅದೇ ಮಾದರಿಯಲ್ಲಿ ಇದೀಗ ತುಮಕೂರಿನಲ್ಲಿ ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂಎಲ್‌ಎ ಅಭಿಯಾನ ಶುರುವಾಗಿದೆ.

ತುಮಕೂರು (ಫೆ.25): ಈ ಹಿಂದೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದು ಬಾರೀ ಸುದ್ದಿಯಾಗಿತ್ತು. ಅದೇ ಮಾದರಿಯಲ್ಲಿ ಇದೀಗ ತುಮಕೂರಿನಲ್ಲಿ ಪೇ ಎಂಎಲ್‌ಎ ಅಭಿಯಾನ ಶುರುವಾಗಿದೆ. ಹೌದು! ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಭಿಯಾನ ಆರಂಭವಾಗಿದ್ದು, ತುಮಕೂರು‌ ನಗರದ ತುಂಬ ಕಾಂಗ್ರೆಸ್ ಪೋಸ್ಟರ್ ಅಂಟಿಸಿದೆ. ಕಾಂಗ್ರೆಸ್ ಮುಖಂಡ ಶಶಿ ಹುಲಿಕುಂಟೆಯಿಂದ ಹಾಗೂ ಕಾರ್ಯಕರ್ತರಿಂದ ಪೋಸ್ಟರ್ ಅಭಿಯಾನ ಶುರುವಾಗಿದ್ದು, ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಪೋಟೊ ಒಳಗೊಂಡಿರೋ ಪೇ ಎಂಎಲ್ಎ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. 

ನಿಮಗೆ ಕೆಲಸ ಆಗಬೇಕೆ, ನನಗೆ ಪೇ ಮಾಡಿ. ಭ್ರಷ್ಟಚಾರ ನನ್ನ ಮೊದಲ ಆದ್ಯತೆ. ಈ ರೀತಿ ಸ್ಲೋಗನ್ ಬರೆದಿರೋ ಪೋಸ್ಟರ್‌ಗಳನ್ನು ತುಮಕೂರು‌ ನಗರದ ಟೌನ್ ಹಾಲ್ ಸರ್ಕಲ್‌, ಬಿ.ಎಚ್.ರಸ್ತೆ, ಹೊರಪೇಟೆಯಲ್ಲಿ ಕಾಂಗ್ರೆಸ್ ಅಂಟಿಸಿದೆ. ತುಮಕೂರು‌ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಯಲ್ಲಿ ಲಂಚದ ಡೀಲ್ ಹಾಗೂ ಕಾಮಗಾರಿಯಲ್ಲಿ ಶಾಸಕ ಜ್ಯೋತಿ ಗಣೇಶ್ ಪರ್ಸೆಂಟೇಜ್‌ನ್ನು ಪಡೆಯುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪೋಸ್ಟರ್ ಅಂಟಿಸಿದೆ. ಇನ್ನು ಪೋಸ್ಟರ್‌ ಅಂಟಿಸಿದ ಹುಡುಗರನ್ನು ತಿಲಕ್ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ರಾಜಕೀಯಕ್ಕಷ್ಟೆ ವಿದಾಯ: ಬಿ.ಎಸ್‌.ಯಡಿಯೂರಪ್ಪ

ಕಾಂಗ್ರೆಸ್‌ನಿಂದ ಪೋಸ್ಟರ್‌ ಅಭಿಯಾನ ಶುರು: ಪೇ-ಸಿಎಂ ಪೋಸ್ಟರ್‌ ಅಭಿಯಾನದ ಬಳಿಕ ರಾಜ್ಯ ಕಾಂಗ್ರೆಸ್‌ ಪಕ್ಷವು ಮತ್ತೊಂದು ಪೋಸ್ಟರ್‌ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶುಕ್ರವಾರ ರಾತ್ರೋ ರಾತ್ರಿ ಕಾರ್ಯಕರ್ತರ ಮೂಲಕ ಬೆಂಗಳೂರು ಹಾಗೂ ಮಂಗಳೂರಿನ ಹಲವೆಡೆ ಬಜೆಟ್‌ ಘೋಷಣೆಗಳನ್ನು ಅಣಕಿಸುವ ‘ಬೇಡಪ್ಪ ಬೇಡ, ಕಿವಿ ಮೇಲೆ ಹೂವು’ ಹೆಸರಿನ ಪೋಸ್ಟರ್‌ಗಳನ್ನು ಅಂಟಿಸಿದೆ.

ಅಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಸ್ವತಃ ಪೋಸ್ಟರ್‌ಗಳನ್ನು ಅಂಟಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದ ಕಾಂಗ್ರೆಸ್‌ ನಾಯಕರು ಉಭಯ ಸದನಗಳಲ್ಲಿ ಕಿವಿ ಮೇಲೆ ಹೂವು ಇಟ್ಟುಕೊಂಡು ಅಧಿವೇಶನದಲ್ಲಿ ಭಾಗವಹಿಸಿದ್ದರು. ಇದು ರಾಜ್ಯಾದ್ಯಂತ ಜನರ ಗಮನ ಸೆಳೆದಿತ್ತು.

ರಾಮಾಯಣದಿಂದ ಪುರುಷಾರ್ಥ ಪ್ರಾಪ್ತಿ: ರಾಘವೇಶ್ವರ ಸ್ವಾಮೀಜಿ

ಇದರಿಂದ ಪ್ರೇರಿತರಾದ ಕೈ ಕಾರ್ಯಕರ್ತರು ರಾತ್ರೋ ರಾತ್ರಿ ತಮ್ಮ ಕೈ ಚಳಕ ತೋರಿ ಬೆಳಗಾಗುವಷ್ಟದಲ್ಲಿ ಬೆಂಗಳೂರು ಹಾಗೂ ಮಂಗಳೂರು ನಗರದ ವಿವಿಧೆಡೆ ಕಿವಿ ಮೇಲೆ ಹೂವು ಪೋಸ್ಟರ್‌ಗಳು ರಾರಾಜಿಸುವಂತೆ ಮಾಡಿದ್ದರು. ಬಿಜೆಪಿ ತನ್ನ ಸಾಧನೆಗಳನ್ನು ಬಿಂಬಿಸಿಕೊಳ್ಳಲು ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಂತಹ ನಾಯಕರ ಫೋಟೋಗಳ ಸಹಿತ ಅಂಟಿಸಿದ್ದ ಪೋಸ್ಟರ್‌ಗಳನ್ನೇ ಗುರಿಯಾಗಿಸಿಕೊಂಡು ‘ಕಿವಿ ಮೇಲೆ ಹೂವು’ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ