ಸಂಡೂರು ಉಪಚುನಾವಣೆ: ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ!

Published : Oct 30, 2024, 10:05 PM IST
ಸಂಡೂರು ಉಪಚುನಾವಣೆ: ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ!

ಸಾರಾಂಶ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡುವಾಗ ಭಾಷಣ ನಿಲ್ಲಿಸಿ ಎಂದು ಜನರು ಕೂಗಾಡಿದ್ದಾರೆ. ಭಾಷಣ ನಿಲ್ಲಿಸಿ ಎಂದಾಗ ನಿಮ್ಮೆಲ್ಲರ ನೋವು ಅರ್ಥವಾಗಿದೆ ಎಂದು ಜನಾರ್ದನ ರೆಡ್ಡಿ ಸಮಾಜಾಯಿಷಿ ನೀಡಲು ಮುಂದಾಗಿದ್ದರು. ಈ ವೇಳೆ ಸುಮ್ಮನಾಗದೇ ಜನರು ಕೂಗಾಡಿದ್ದಾರೆ.   

ಬಳ್ಳಾರಿ(ಅ.30): ಸಂಡೂರು ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಏತನ್ಮಧ್ಯೆ ಉಪಚುನಾವಣೆಯ ಪ್ರಚಾರಕ್ಕೆ ಹೋದ ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಜನರು ತರಾಟೆಗೆ ತೆಗೆದುಕೊಂಡ ಘಟನೆ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡತಿನಿಯಲ್ಲಿ ಇಂದು(ಬುಧವಾರ) ನಡೆದಿದೆ. 

ಭೂಮಿ ಕಳೆದುಕೊಂಡ ರೈತರಿಗಿನ್ನು ಪರಿಹಾರ ಸಮರ್ಪಕವಾಗಿ ಸಿಕ್ಕಿಲ್ಲ. ಹದಿನಾಲ್ಕು ವರ್ಷದ ಹಿಂದೆ ಭೂಮಿ ನೀಡಿದ್ರೂ ಕಂಪನಿ ಪ್ರಾರಂಭ ಮಾಡಿಲ್ಲ. ಹೀಗಾಗಿ ಭೂಮಿ ವಾಪಸ್ ಮಾಡಿ ಇಲ್ಲವಾದರೆ ಕಂಪನಿ ಪ್ರಾರಂಭಿಸಿ ಎಂದ ಜನರು ಉಭಯ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. 

ಬಳ್ಳಾರಿ ಜನರಿಗೆ ಬೇಕಾಗಿರುವುದು ಬಸ್‌ಗಳು, ವಿಮಾನ ನಿಲ್ದಾಣವಲ್ಲ: ಶಾಸಕ ಬಿ.ಆರ್.ಪಾಟೀಲ್

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡುವಾಗ ಭಾಷಣ ನಿಲ್ಲಿಸಿ ಎಂದು ಜನರು ಕೂಗಾಡಿದ್ದಾರೆ. ಭಾಷಣ ನಿಲ್ಲಿಸಿ ಎಂದಾಗ ನಿಮ್ಮೆಲ್ಲರ ನೋವು ಅರ್ಥವಾಗಿದೆ ಎಂದು ಜನಾರ್ದನ ರೆಡ್ಡಿ ಸಮಾಜಾಯಿಷಿ ನೀಡಲು ಮುಂದಾಗಿದ್ದರು. ಈ ವೇಳೆ ಸುಮ್ಮನಾಗದೇ ಜನರು ಕೂಗಾಡಿದ್ದಾರೆ. 

ಒಂದಿಬ್ಬರು ಕುಡಿದು ಮಾತನಾಡುತ್ತಿದ್ದಾರೆ. ಪೊಲೀಸರು ಇವರನ್ನು ಕಳಿಸಿ ಎಂದು ಜನಾರ್ದನ ರೆಡ್ಡಿ ಗದರಿದ್ದಾರೆ. ಆಗ ಮತ್ತಷ್ಟು ಕೆರಳಿದ ಜನರು ಮತ್ತಷ್ಟು ಜೋರಾಗಿ ಕೂಗಾಡಿದ್ದಾರೆ. ಕೊನೆಗೂ ಭಾಷಣ ಮುಗಿಸಿ ರೆಡ್ಡಿ, ರಾಮುಲು  ವಾಪಾಸ್ ಹೋಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!