ಮುಂದೂಡಿಕೆಯಾಯ್ತು ಚುನಾವಣಾ ಫಲಿತಾಂಶದ ಡೇಟ್ : ವಿರುದ್ಧ ಅರ್ಜಿ

Kannadaprabha News   | Asianet News
Published : Nov 04, 2020, 09:58 AM IST
ಮುಂದೂಡಿಕೆಯಾಯ್ತು ಚುನಾವಣಾ ಫಲಿತಾಂಶದ ಡೇಟ್  : ವಿರುದ್ಧ ಅರ್ಜಿ

ಸಾರಾಂಶ

ಚುನಾವಣಾ ಫಲಿತಾಂಶದ ದಿನಾಂಕ ಮುಂದೂಡಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ

ಬೆಂಗಳೂರು (ನ.04): ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ದಿನಾಂಕ ಮುಂದೂಡಿರುವ ಕ್ರಮ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

 ಈ ಕುರಿತು ‘ದಿ ನ್ಯೂಸ್‌ ಇಂಡಿಯಾ ವೋಟರ್ಸ್‌ ಫೋರಂ’ ಅರ್ಜಿ ಸಲ್ಲಿಸಿದ್ದು, ಸೋಮವಾರ ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಚುನಾವಣಾಧಿಕಾರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಿತು.

ಬೈ ಎಲೆಕ್ಷನ್: BJP, JDS, ಕಾಂಗ್ರೆಸ್ ಸೋಲು-ಗೆಲುವಿಗೆ ಕಾರಣವಾಗಬಹುದಾದ ಅಂಶಗಳು..

ಅಲ್ಲದೆ, ಮತ ಪೆಟ್ಟಿಗೆಗಳಿರುವ ಸ್ಥಳದಲ್ಲಿರುವ ಭದ್ರತಾ ವ್ಯವಸ್ಥೆಯ ಕುರಿತು ಮಾಹಿತಿ ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ನ.5ಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್