ರಾಜಸ್ಥಾನ ರಾಜಕೀಯ ಡ್ರಾಮಾ ಕ್ಲೈಮಾಕ್ಸ್‌ಗೆ ದಿನಾಂಕ ಫಿಕ್ಸ್! ಪೈಲಟ್ ಕಿರುನಗೆ

Published : Jul 17, 2020, 07:45 PM ISTUpdated : Jul 17, 2020, 08:24 PM IST
ರಾಜಸ್ಥಾನ ರಾಜಕೀಯ ಡ್ರಾಮಾ ಕ್ಲೈಮಾಕ್ಸ್‌ಗೆ ದಿನಾಂಕ ಫಿಕ್ಸ್! ಪೈಲಟ್ ಕಿರುನಗೆ

ಸಾರಾಂಶ

ರಾಜಸ್ಥಾನ ಪೊಲಿಟಿಕಲ್ ಹೈ ಡ್ರಾಮಾ/  ವಿಚಾರಣೆ ಮುಂದಕ್ಕೆ ಹಾಕಿದ ನ್ಯಾಯಾಲಯ/ 21 ರ ವರೆಗೆ ಸ್ಪೀಕರ್ ಯಾವುದೆ ಕ್ರಮ ತೆಗೆದುಕೊಳ್ಳುವಂತೆ ಇಲ್ಲ

ಜೈಪುರ(ಜು. 17) ರಾಜಸ್ಥಾನದ ರಾಜಕಾರಣದ ಒಂದು ಹಂತದ ಕ್ಲೈಮಾಕ್ಸ್ ಗೆ ದಿನಾಂಕ ನಿಗದಿಯಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ  ಪೈಲಟ್ ತಂಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜಸ್ಥಾನ ಹೈಕೋರ್ಟ್ ಜು. 20ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇಂದ್ರಜೀತ್ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಕಾಶ್ ಗುಪ್ತಾವಿಭಾಗೀಯ ಪೀಠ, ಮಂಗಳವಾರದವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸ್ಪೀಕರ್ ಸಿಪಿ ಜೋಶಿಗೆ ಸೂಚಿಸಿದೆ.

ಕರ್ನಾಟಕಕ್ಕೂ ರಾಜಸ್ಥಾನಕ್ಕೂ ರಾಜಕೀಯ ಡ್ರಾಮಾದಲ್ಲಿ ಏನೆಲ್ಲ ಸಾಮ್ಯತೆ

ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಸಿ. ಪಿ. ಜೋಷಿ ಅವರು ನೋಟಿಸ್ ನೀಡಿದ್ದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ನಿಮ್ಮ ಮೇಲೆ ಯಾಕೆ ಕ್ರಮ ಜರುಗಿಸಬಾರದು ಎಂದು ಪ್ರಶ್ನೆ ಮಾಡಿದ್ದರು.

ಜುಲೈ 21ರ ವರೆಗೆ ಬಂಡಾಯ ಶಾಸಕರ ವಿರುದ್ಧ ಸ್ಪೀಕರ್ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೋರ್ಟ್ ಗೆ ತಿಳಿಸಿದ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ  ಮಾಹಿತಿ ನೀಡಿದ್ದಾರೆ.

ಪೈಲಟ್ ಬಣದ ಪರ ವಾದ ಮಂಡಿಸಿದ ವಕೀಲ ಹರೀಶ್ ಸಾಳ್ವೆ, ವಿಧಾನಸಭೆ ಅಧಿವೇಶನ ನಡೆದ ಸಂದರ್ಭದಲ್ಲಿ ಮಾತ್ರ ವಿಪ್‌ ಅನ್ವಯವಾಗುತ್ತದೆ. ಹೀಗಾಗಿ ಸ್ಪೀಕರ್ ನೀಡಿರುವ ಈ ನೋಟಿಸ್‌ಗೆ ಈಗ ಯಾವುದೇ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂಬ ವಾದ ಮುಂದಿಟ್ಟರು. ಸಚಿನ್‌ ಪೈಲಟ್‌ ಪರ ಹರೀಶ್‌ ಸಾಳ್ವೆ ಮತ್ತು ಮುಕುಲ್‌ ರೋಹಟಗಿ ವಾದ ಮಂಡಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ