'ಹಿಂದೂ ಸಂಘಟನೆಗಳು, ಪ್ರಧಾನಿ ನನ್ನನ್ನು ಸೋಲಿಸಲೆಂದೇ ಟಾರ್ಗೆಟ್ ಮಾಡಿದ್ರು'

Published : Feb 25, 2021, 10:14 PM IST
'ಹಿಂದೂ ಸಂಘಟನೆಗಳು, ಪ್ರಧಾನಿ ನನ್ನನ್ನು ಸೋಲಿಸಲೆಂದೇ ಟಾರ್ಗೆಟ್ ಮಾಡಿದ್ರು'

ಸಾರಾಂಶ

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಕಹಿ ನೆನಪನ್ನು ಮೆಲುಕು ಹಾಕಿದ್ದಾರೆ.

ದಾವಣಗೆರೆ, (ಫೆ.25): ಕಳೆದ ಬಾರಿ ಚುನಾವಣೆಯಲ್ಲಿ ಆರ್​ಎಸ್​ಎಸ್, ಹಿಂದೂ ಸಂಘಟನೆಗಳು, ದೇಶದ ಪ್ರಧಾನಿ ನನ್ನನ್ನು ಸೋಲಿಸಬೇಕೆಂದು ಟಾರ್ಗೆಟ್ ಮಾಡಿದ್ದರು ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇಂದು (ಗುರುವಾರ) ದಾವಣಗೆರೆಯಲ್ಲಿ ಮಾತನಾಡಿದ ಖರ್ಗೆ, ಕಳೆದ ಬಾರಿ ಸ್ಪರ್ಧಿಸಿದ್ದ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿತ್ತು. ಆದ್ರೆ ನನ್ನನ್ನು ಸೋಲಿಸಿದರು. ಅದಕ್ಕೆ ಕ್ಷೇತ್ರದ ಜನರೂ ಸಹ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.

ರಾಜ್ಯಸಭೆಗೆ ಕಾಂಗ್ರೆಸ್ಸಿಗ ಖರ್ಗೆ ವಿಪಕ್ಷ ನಾಯಕ!

ರಾಜ್ಯಸಭಾ ವಿರೋಧ ಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ನಮನಗಳು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಬಿಜೆಪಿಯ ಉಮೇಶ್ ಜಾಧವ್ ಅವರು ಸೋಲಿಸಿದ್ದರು. ಸೋಲಿನ ಕಹಿ ನೆನಪನ್ನು ಖರ್ಗೆ ನೆನಪಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
ಬಿಎಂಸಿ ಚುನಾವಣೆಯಲ್ಲಿ ಗೆಲುವು: ರಾಜ್‌ಠಾಕ್ರೆ, ಉದ್ಧವ್ ಠಾಕ್ರೆಗೆ ರಸಮಲೈ ಕಳುಹಿಸಿದ ಬಿಜೆಪಿಯ ಬಗ್ಗಾ